ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ 
ದೇಶ

ನಮ್ಮ ಕಾನೂನು ವ್ಯವಸ್ಥೆಯನ್ನು ಭಾರತೀಯಗೊಳಿಸುವ ಅಗತ್ಯವಿದೆ: ಸಿಜೆಐ ಎನ್.ವಿ ರಮಣ

ನಮ್ಮ ಕಾನೂನು ವ್ಯವಸ್ಥೆಯನ್ನು ಭಾರತೀಯಗೊಳಿಸುವುದು ಈ ಸಮಯದ ಅವಶ್ಯಕತೆ ಎಂದು ನ್ಯಾ. ಎನ್ ವಿ ರಮಣ ಹೇಳಿದ್ದಾರೆ.

ಬೆಂಗಳೂರು: ನಮ್ಮ ಕಾನೂನು ವ್ಯವಸ್ಥೆಯನ್ನು ಭಾರತೀಯಗೊಳಿಸುವುದು ಈ ಸಮಯದ ಅವಶ್ಯಕತೆ ಎಂದು ನ್ಯಾ. ಎನ್ ವಿ ರಮಣ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ವಿಧಾನಸೌಧದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ನ್ಯಾ. ಮೋಹನ್ ಎಂ ಶಾಂತನಗೌಡರ್ ಅವರಿಗೆ ಗೌರವ ಅರ್ಪಿಸಿ "ಭಾರತೀಯ ನ್ಯಾಯ-ಕಾನೂನು ವ್ಯವಸ್ಥೆ ವಿಷಯದ ಬಗ್ಗೆ ಮಾತನಾಡಿದ ಅವರು, ನಮ್ಮ ಕಾನೂನಿನ ವ್ಯವಸ್ಥೆಯನ್ನು ಭಾರತೀಯಗೊಳಿಸುವುದು ಈ ಸಮಯದ ಅಗತ್ಯತೆ ಎಂದು ಹೇಳಿದ್ದಾರೆ. ನಮ್ಮ ವ್ಯವಸ್ಥೆ, ಅಭ್ಯಾಸಗಳು, ನಿಯಮಗಳು ವಸಾಹತು ಮೂಲದ್ದಾಗಿದ್ದು ಭಾರತದ ಸಂಕೀರ್ಣತೆಗೆ, ಭಾರತೀಯ ಜನಸಂಖ್ಯೆಗೆ ಹಾಗೂ ಕೋರ್ಟ್ ಗಳ ಕಾರ್ಯನಿರ್ವಹಣೆಗೆ  ಹೊಂದುವುದಿಲ್ಲ ಎಂದು ಹೇಳಿದ್ದಾರೆ.

ಭಾರತೀಯಗೊಳಿಸುವುದು ಎಂದರೆ ನಮ್ಮ ಸಮಾಜದ ನೈಜ, ವಾಸ್ತವಗಳನ್ನು ಅಳವಡಿಸಿಕೊಂಡು ನ್ಯಾಯದಾನ ವ್ಯವಸ್ಥೆಯನ್ನು ಪ್ರಾದೇಶೀಕರಿಸುವುದು ಎಂಬುದಾಗಿದೆ ಎಂದು ಎನ್ ವಿ ರಮಣ ಹೇಳಿದ್ದಾರೆ.

ಗ್ರಾಮೀಣ ಭಾಗಗಳಲ್ಲಿ ಕೌಟುಂಬಿಕ ವಿವಾದಗಳನ್ನು ಎದುರಿಸುತ್ತಿರುವ ವ್ಯಕ್ತಿಗಳಿಗೆ ಕೋರ್ಟ್ ನಲ್ಲಿ ನಮ್ಮ ಪ್ರದೇಶದಿಂದ ಹೊರಗಿದ್ದೇವೆ ಎಂಬ ಭಾವನೆ ಮೂಡುವಂತಾಗುತ್ತದೆ. ಬಹುತೇಕ ಆಂಗ್ಲ ಭಾಷೆಗಳಲ್ಲಿರುವ ವಾದಗಳನ್ನು ಅಥವಾ ಕಲಾಪವನ್ನು ಅವರಿಗೆ ಅರ್ಥ ಮಾಡಿಕೊಳ್ಳುವುದಕ್ಕೆ ಆಗುವುದಿಲ್ಲ.

ಇತ್ತೀಚಿನ ದಿನಗಳಲ್ಲಿ ತೀರ್ಪುಗಳು ಅತಿದೀರ್ಘವಾಗಿರುತ್ತದೆ. ಅದನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಅಥವಾ ತಮ್ಮ ಸ್ಥಿತಿ ಏನಾಗಿದೆ ಎಂಬುದನ್ನು ಅರಿತುಕೊಳ್ಳುವುದಕ್ಕೆ ದಾವೆದಾರರಿಗೆ ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಅವರು ಹೆಚ್ಚು ಹಣ ಖರ್ಚು ಮಾಡಬೇಕಾಗುತ್ತದೆ ಎಂದು ಸಿಜೆಐ ರಮಣ ಹೇಳಿದ್ದಾರೆ.

ನ್ಯಾಯದಾನದಲ್ಲಿ ಸರಳತೆ ನಮ್ಮ ಮುಖ್ಯ ಕಾಳಜಿಯಾಗಿರಬೇಕು, ನ್ಯಾಯದಾನವನ್ನು ಹೆಚ್ಚು ಪಾರದರ್ಶಕ, ಸುಲಭ ಮತ್ತು ಪರಿಣಾಮಕಾರಿ ವಾಗಿರುವಂತೆ ಮಾಡುವುದು ಮುಖ್ಯ ಎಂದು ಸಿಜೆಐ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT