ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ 
ದೇಶ

ನಮ್ಮ ಕಾನೂನು ವ್ಯವಸ್ಥೆಯನ್ನು ಭಾರತೀಯಗೊಳಿಸುವ ಅಗತ್ಯವಿದೆ: ಸಿಜೆಐ ಎನ್.ವಿ ರಮಣ

ನಮ್ಮ ಕಾನೂನು ವ್ಯವಸ್ಥೆಯನ್ನು ಭಾರತೀಯಗೊಳಿಸುವುದು ಈ ಸಮಯದ ಅವಶ್ಯಕತೆ ಎಂದು ನ್ಯಾ. ಎನ್ ವಿ ರಮಣ ಹೇಳಿದ್ದಾರೆ.

ಬೆಂಗಳೂರು: ನಮ್ಮ ಕಾನೂನು ವ್ಯವಸ್ಥೆಯನ್ನು ಭಾರತೀಯಗೊಳಿಸುವುದು ಈ ಸಮಯದ ಅವಶ್ಯಕತೆ ಎಂದು ನ್ಯಾ. ಎನ್ ವಿ ರಮಣ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ವಿಧಾನಸೌಧದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ನ್ಯಾ. ಮೋಹನ್ ಎಂ ಶಾಂತನಗೌಡರ್ ಅವರಿಗೆ ಗೌರವ ಅರ್ಪಿಸಿ "ಭಾರತೀಯ ನ್ಯಾಯ-ಕಾನೂನು ವ್ಯವಸ್ಥೆ ವಿಷಯದ ಬಗ್ಗೆ ಮಾತನಾಡಿದ ಅವರು, ನಮ್ಮ ಕಾನೂನಿನ ವ್ಯವಸ್ಥೆಯನ್ನು ಭಾರತೀಯಗೊಳಿಸುವುದು ಈ ಸಮಯದ ಅಗತ್ಯತೆ ಎಂದು ಹೇಳಿದ್ದಾರೆ. ನಮ್ಮ ವ್ಯವಸ್ಥೆ, ಅಭ್ಯಾಸಗಳು, ನಿಯಮಗಳು ವಸಾಹತು ಮೂಲದ್ದಾಗಿದ್ದು ಭಾರತದ ಸಂಕೀರ್ಣತೆಗೆ, ಭಾರತೀಯ ಜನಸಂಖ್ಯೆಗೆ ಹಾಗೂ ಕೋರ್ಟ್ ಗಳ ಕಾರ್ಯನಿರ್ವಹಣೆಗೆ  ಹೊಂದುವುದಿಲ್ಲ ಎಂದು ಹೇಳಿದ್ದಾರೆ.

ಭಾರತೀಯಗೊಳಿಸುವುದು ಎಂದರೆ ನಮ್ಮ ಸಮಾಜದ ನೈಜ, ವಾಸ್ತವಗಳನ್ನು ಅಳವಡಿಸಿಕೊಂಡು ನ್ಯಾಯದಾನ ವ್ಯವಸ್ಥೆಯನ್ನು ಪ್ರಾದೇಶೀಕರಿಸುವುದು ಎಂಬುದಾಗಿದೆ ಎಂದು ಎನ್ ವಿ ರಮಣ ಹೇಳಿದ್ದಾರೆ.

ಗ್ರಾಮೀಣ ಭಾಗಗಳಲ್ಲಿ ಕೌಟುಂಬಿಕ ವಿವಾದಗಳನ್ನು ಎದುರಿಸುತ್ತಿರುವ ವ್ಯಕ್ತಿಗಳಿಗೆ ಕೋರ್ಟ್ ನಲ್ಲಿ ನಮ್ಮ ಪ್ರದೇಶದಿಂದ ಹೊರಗಿದ್ದೇವೆ ಎಂಬ ಭಾವನೆ ಮೂಡುವಂತಾಗುತ್ತದೆ. ಬಹುತೇಕ ಆಂಗ್ಲ ಭಾಷೆಗಳಲ್ಲಿರುವ ವಾದಗಳನ್ನು ಅಥವಾ ಕಲಾಪವನ್ನು ಅವರಿಗೆ ಅರ್ಥ ಮಾಡಿಕೊಳ್ಳುವುದಕ್ಕೆ ಆಗುವುದಿಲ್ಲ.

ಇತ್ತೀಚಿನ ದಿನಗಳಲ್ಲಿ ತೀರ್ಪುಗಳು ಅತಿದೀರ್ಘವಾಗಿರುತ್ತದೆ. ಅದನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಅಥವಾ ತಮ್ಮ ಸ್ಥಿತಿ ಏನಾಗಿದೆ ಎಂಬುದನ್ನು ಅರಿತುಕೊಳ್ಳುವುದಕ್ಕೆ ದಾವೆದಾರರಿಗೆ ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಅವರು ಹೆಚ್ಚು ಹಣ ಖರ್ಚು ಮಾಡಬೇಕಾಗುತ್ತದೆ ಎಂದು ಸಿಜೆಐ ರಮಣ ಹೇಳಿದ್ದಾರೆ.

ನ್ಯಾಯದಾನದಲ್ಲಿ ಸರಳತೆ ನಮ್ಮ ಮುಖ್ಯ ಕಾಳಜಿಯಾಗಿರಬೇಕು, ನ್ಯಾಯದಾನವನ್ನು ಹೆಚ್ಚು ಪಾರದರ್ಶಕ, ಸುಲಭ ಮತ್ತು ಪರಿಣಾಮಕಾರಿ ವಾಗಿರುವಂತೆ ಮಾಡುವುದು ಮುಖ್ಯ ಎಂದು ಸಿಜೆಐ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT