ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ 
ದೇಶ

ಮಹಾರಾಷ್ಟ್ರ: ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ ಬಂಧನ

ಮಹಾರಾಷ್ಟ್ರದ ಸತಾರ ಜಿಲ್ಲೆಯ ಕರಡ್ ರೈಲ್ವೆ ನಿಲ್ದಾಣದಲ್ಲಿ ಇಂದು ಮುಂಜಾನೆ ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ ಅವರನ್ನು ಬಂಧಿಸಲಾಗಿದೆ. ಸೋಮಯ್ಯ ಇಂದು ಕೊಲ್ಹಾಪುರಕ್ಕೆ ಭೇಟಿ ನೀಡಬೇಕಿತ್ತು. ರೈಲ್ವಿನ ಮೂಲಕ ಕೊಲ್ಹಾಪುರಕ್ಕೆ ತೆರಳುವಾಗ ಬಂಧಿಸಲಾಗಿದೆ. 

ಸತಾರ: ಮಹಾರಾಷ್ಟ್ರದ ಸತಾರ ಜಿಲ್ಲೆಯ ಕರಡ್ ರೈಲ್ವೆ ನಿಲ್ದಾಣದಲ್ಲಿ ಇಂದು ಮುಂಜಾನೆ ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ ಅವರನ್ನು ಬಂಧಿಸಲಾಗಿದೆ. ಸೋಮಯ್ಯ ಇಂದು ಕೊಲ್ಹಾಪುರಕ್ಕೆ ಭೇಟಿ ನೀಡಬೇಕಿತ್ತು. ರೈಲ್ವಿನ ಮೂಲಕ ಕೊಲ್ಹಾಪುರಕ್ಕೆ ತೆರಳುವಾಗ ಬಂಧಿಸಲಾಗಿದೆ. 

ಸೋಮಯ್ಯ ಕೊಲ್ಹಾಪುರ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿಷೇಧ ಆದೇಶ ಹೊರಡಿಸಿದ್ದರು. ಅಲ್ಲದೇ, ಇಂದು ಮತ್ತು ನಾಳೆ ಸೆಕ್ಷನ್ 144 ಜಾರಿಗೊಳಿಸಲಾಗಿತ್ತು. ತನ್ನನ್ನು ಮುಂಬೈನ ನಿವಾಸದಲ್ಲಿ ಬಂಧಿಸಲಾಗಿದೆ ಎಂದು ಬಿಜೆಪಿ ನಾಯಕ ಭಾನುವಾರ ಆರೋಪಿಸಿದ್ದರು. 

ಕೊಲ್ಹಾಪುರಕ್ಕೆ ಹೋಗುವ ಮಾರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮತ್ತು ಮುಂಬೈಯಿಂದ ಹೊರಗೆ ಹೋಗದಂತೆ ನಿರ್ಬಂಧಿಸುವ ಆದೇಶಗಳನ್ನು ಯಾರು ನೀಡುತ್ತಾರೆ ಎಂದು ಪ್ರಶ್ನಿಸಿದರು. 

ಮಹಾರಾಷ್ಟ್ರ ಸಚಿವ ಹಸನ್ ಮುಶ್ರಿಫ್ ಒಡೆತನದ ಆಸ್ತಿ ಇರುವ ಜಾಗಗಳಿಗೆ ಭೇಟಿ ನೀಡಬೇಕಿತ್ತು. ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಅವರು ಹೇಳಿಕೆ ನೀಡಿದ್ದರು. ಈ ಹಿಂದೆ ಮಹಾರಾಷ್ಟ್ರದ ಕ್ಯಾಬಿನೆಟ್ ಮಂತ್ರಿಗಳಾದ ಚಗನ್ ಭುಜ್ಬಲ್ ಮತ್ತು ಅನಿಲ್ ಪರಬ್ ವಿರುದ್ಧ ಹಣ ವರ್ಗಾವಣೆ ಆರೋಪವನ್ನು ಸೋಮಯ್ಯ  ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT