ತರುಣ್ ತೇಜ್ ಪಾಲ್ 
ದೇಶ

ಪತ್ರಕರ್ತ ತರುಣ್ ತೇಜ್ ಪಾಲ್ ಪ್ರಕರಣ: ಅಕ್ಟೋಬರ್ 27ಕ್ಕೆ ವಿಚಾರಣೆ ಮುಂದೂಡಿಕೆ

ಗೋವಾ ಸರ್ಕಾರದ ಪರ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ದೇವಿದಾಸ್ ಪಂಗಂ ಮತ್ತು ತೇಜ್‌ಪಾಲ್ ಪರ ವಕೀಲರು ಮುಂದಿನ ವಿಚಾರಣೆಯ ದಿನಾಂಕವನ್ನು ತಿಳಿಸುವಂತೆ ನ್ಯಾಯಮೂರ್ತಿಗಳಾದ ಎಂ ಎಸ್ ಸೋನಾಕ್ ಮತ್ತು ಎಂ ಎಸ್ ಜಾವಲ್ಕರ್ ಅವರ ಪೀಠವನ್ನು ಕೇಳಿದರು.

ಪಣಜಿ: 2013 ರ ಅತ್ಯಾಚಾರ ಪ್ರಕರಣದಲ್ಲಿ ಪತ್ರಕರ್ತ ತರುಣ್ ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ಅಕ್ಟೋಬರ್ 27 ರಂದು ಕೈಗೆತ್ತಿಕೊಳ್ಳುವುದಾಗಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಹೇಳಿದೆ. 

ಗೋವಾ ಸರ್ಕಾರದ ಪರ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ದೇವಿದಾಸ್ ಪಂಗಂ ಮತ್ತು ತೇಜ್‌ಪಾಲ್ ಪರ ವಕೀಲರು ಮುಂದಿನ ವಿಚಾರಣೆಯ ದಿನಾಂಕವನ್ನು ತಿಳಿಸುವಂತೆ ನ್ಯಾಯಮೂರ್ತಿಗಳಾದ ಎಂ ಎಸ್ ಸೋನಾಕ್ ಮತ್ತು ಎಂ ಎಸ್ ಜಾವಲ್ಕರ್ ಅವರ ಪೀಠವನ್ನು ಕೇಳಿದರು. 

ಅರ್ಜಿ ಕೈಗೆತ್ತಿಕೊಂಡ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 27 ಕ್ಕೆ ಮುಂದೂಡಿತು. ನ್ಯಾಮೂರ್ತಿ ಸೊನಾಕ್‌ ಅವರು, ’ಈ ಪ್ರಕರಣದ ಮಂದಿನ ವಿಚಾರಣೆಯನ್ನು ವರ್ಚುವಲ್‌ ಮೂಲಕ ನಡೆಸಲು ನ್ಯಾಯಾಲಯ ಸೌಲಭ್ಯ ಕಲ್ಪಿಸಲಿದೆ. ಅಂದಿನ ನ್ಯಾಯಾಲಯದ ಕಲಾಪದಲ್ಲಿ ಗೋವಾ ಸರ್ಕಾರದ ಪರವಾಗಿ ಕೇಂದ್ರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ದೆಹಲಿಯಿಂದ ಪಾಲ್ಗೊಳ್ಳಲಿದ್ದಾರೆ‘ ಎಂದು ಹೇಳಿದರು.

ಅತ್ಯಾಚಾರ ಪ್ರಕರಣದಲ್ಲಿ ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸುವುದರ ವಿರುದ್ಧ ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ವನವಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 20 ಕ್ಕೆ ಮುಂದೂಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT