ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಅವರೊಂದಿಗೆ ನೂತನ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಛನಿ ಮತ್ತಿತರರು 
ದೇಶ

ಪಂಜಾಬ್ ಗೆ ಇಬ್ಬರು ಉಪ ಮುಖ್ಯಮಂತ್ರಿಗಳು: ಹರೀಶ್ ರಾವತ್

 ಪಂಜಾಬ್ ನಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳು ಇರಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ. 

ಚಂಡೀಘಡ: ಪಂಜಾಬ್ ನಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳು ಇರಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ. 

ಪಂಜಾಬ್ ಸರ್ಕಾರದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳು ಇರಲಿದ್ದಾರೆ. ಸಿಖ್ ಸಮುದಾಯ ಪ್ರಾಬಲ್ಯದ ರಾಜ್ಯದಲ್ಲಿ ಒಬ್ಬರು ಜಾಟ್ ಸಿಖ್ ಸಮುದಾಯದಿಂದ ಉಪ ಮುಖ್ಯಮಂತ್ರಿಯಾದರೆ ಮತ್ತೊಬ್ಬರು ಹಿಂದು ಸಮುದಾಯದಿಂದ ಉಪ ಮುಖ್ಯ ಮಂತ್ರಿಯಾಗಲಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆಗೆ ಹರೀಶ್ ರಾವತ್ ತಿಳಿಸಿದ್ದಾರೆ.

ಜಾಟ್ ಸಿಖ್ ಸಮುದಾಯದಿಂದ ಶಾಸಕ  ದೇರಾ ಬಾಬಾ ನಾನಕ್ ಸುಖಜಿಂದರ್ ಸಿಂಗ್ ರಾಂಧವಾ ಅವರ ಹೆಸರನ್ನು ಪರಿಗಣಿಸಲಾಗಿದ್ದು, ಹಿಂದೂ ಸಮುದಾಯದ ಸಂಭಾವ್ಯರಲ್ಲಿ ಬ್ರಹ್ಮ ಸಿಂಗ್ ಮೊಹಿಂದ್ರಾ (ಪಟಿಯಾಲ ಗ್ರಾಮೀಣ ಶಾಸಕ), ವಿಜಯ್ ಇಂದರ್ ಸಿಂಗ್ಲಾ (ಸಂಗ್ರೂರ್ ಶಾಸಕರು) ಮತ್ತು ಭರತ್ ಭೂಷಣ್ ಅಶು (ಪಂಜಾಬ್ ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಮಂತ್ರಿ) ಅವರು ಹೆಸರುಗಳು ಕೇಳಿಬರುತ್ತಿದೆ.

ಉಪಮುಖ್ಯಮಂತ್ರಿಯ ಎರಡನೇ ಹೆಸರನ್ನು ಅಂತಿಮಗೊಳಿಸಿದರೆ ಚನ್ನಿ ಜೊತೆಗೆ ಇಬ್ಬರು ಉಪಮುಖ್ಯಮಂತ್ರಿಗಳು ಸೋಮವಾರ ಪ್ರಮಾಣವಚನ ಸ್ವೀಕರಿಸುತ್ತಾರೆ. ಒಂದು ವೇಳೆ, ಉಪಮುಖ್ಯಮಂತ್ರಿಗಳ ನಿರ್ಧಾರ ವಿಳಂಬವಾದರೆ ನಂತರ ಅವರಿಗೆ ಪ್ರಮಾಣವಚನ ಬೋಧಿಸಲಾಗುತ್ತದೆ. ಚರಣ್ ಜಿತ್ ಸಿಂಗ್ ಛನಿ ಇಂದು 11 ಗಂಟೆಗೆ ಪಂಜಾಬಿನ 16ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!

X ಖಾತೆ ನಿರ್ಬಂಧ ವಿವಾದ: ನಮ್ಮನ್ನು ಭಯೋತ್ಪಾದಕರು ಎನ್ನುತ್ತೀರಾ? ನಾಚಿಕೆಯಾಗುವುದಿಲ್ಲವೇ ನಿಮಗೆ?; ಕೇಂದ್ರದ ವಿರುದ್ಧ Cockroach Janta Party ಕಿಡಿ..!