ಬಡ ಕುಟುಂಬದ ಜೊತೆ ಶ್ರೀರಾಮಮೂರ್ತಿ 
ದೇಶ

ಒಂದೇ ವೋಟ್ ನಲ್ಲಿ ಪಂಚಾಯಿತಿ ಎಲೆಕ್ಷನ್ ಸೋತರೂ ಚುನಾವಣಾ ಪ್ರಚಾರ ಭರವಸೆ ಈಡೇರಿಸಲು ಅಭ್ಯರ್ಥಿ ಮುಂದು

ಚುನಾವಣಾ ಪ್ರಚಾರ ವೇಳೆ ಅವರು ಕಳೆದ 10 ವರ್ಷಗಳಿಂದ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಡ ಕುಟುಂಬವೊಂದನ್ನು ಭೇಟಿ ಮಾಡಿದ್ದರು. ಅವರಿಗೆ ಮನೆ ಕಟ್ಟಿಸಿಕೊಡುವ ಭರವಸೆ ನೀಡಿದ್ದರು. 

ಶ್ರೀಕಾಕುಲಂ: ವೃತ್ತಿಯಲ್ಲಿ ವಕೀಲರಾದ ಶ್ರೀರಾಮಮೂರ್ತಿ, ತಮಿಳುನಾಡಿನ ಧವಳಪೇಟ ಪಂಚಾಯಿತಿ ಚುನಾವಣೆಯಲ್ಲಿ ಒಂದೇ ವೋಟಿನಿಂದ ಸೋತಿದ್ದರು. ಆದರೆ ಚುನಾವಣಾ ಪ್ರಚಾರ ವೇಳೆ ತಾವು ನೀಡಿದ್ದ ಭರವಸೆಗಳನ್ನು ಮರೆಯದೆ ಈಡೇರಿಸುವ ಮೂಲಕ ಜನರ ಮನಸ್ಸನ್ನು ಗೆದ್ದಿದ್ದಾರೆ. 

ಚುನಾವಣಾ ಪ್ರಚಾರ ವೇಳೆ ಅವರು ಕಳೆದ 10 ವರ್ಷಗಳಿಂದ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಡ ಕುಟುಂಬವೊಂದನ್ನು ಭೇಟಿ ಮಾಡಿದ್ದರು. ಅವರಿಗೆ ಮನೆ ಕಟ್ಟಿಸಿಕೊಡುವ ಭರವಸೆ ನೀಡಿದ್ದರು. 

ಚುನಾವಣೆಯಲ್ಲಿ ಸೋತ ನಂತರ ತಮ್ಮ ಮಾತು ಮರೆಯದ ಶ್ರೀರಾಮಮೂರ್ತಿ ತಮ್ಮ ಸ್ವಂತ ದುಡಿಮೆಯಾದ 3 ಲಕ್ಷ ರೂ. ಖರ್ಚು ಮಾಡಿ ಮನೆ ನಿರ್ಮಿಸಿಕೊಟ್ಟಿದ್ದಾರೆ. 

ಇದುವರೆಗೂ ಗುಡಿಸಲಿನಲ್ಲಿ ವಾಸಿಸುತ್ತಿದ್ದ 7 ಮಂದಿ ಸದಸ್ಯರ ಬಡ ಕುಟುಂಬ ಇನ್ನುಮುಂದೆ ಹೊಸಮನೆಯಲ್ಲಿ ಜೀವನ ಸಾಗಿಸಲಿದೆ. ಈ ಬಗ್ಗೆ ಮಾತನಾಡಿರುವ ಶ್ರೀರಾಮಮೂರ್ತಿ ತಾವು ಜನರ ಸೇವೆಗಾಗಿ ರಾಜಕೀಯಕ್ಕೆ ಬಂದಿದ್ದು, ಚುನಾವಣೆಯಲ್ಲಿ ಸೋತರೂ ಜನಸೇವೆ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT