ಸುರೇಶ್ ಗೋಪಿ 
ದೇಶ

ಮಾದಕ ವಸ್ತು ಜಿಹಾದ್: ಪಿಣರಾಯಿ ಸರ್ಕಾರದ ಬೆನ್ನಿಗೆ ನಿಂತ ಬಿಜೆಪಿ ಸಂಸದ, ನಟ ಸುರೇಶ್ ಗೋಪಿ; ಕಮಲ ಪಾಳಯಕ್ಕೆ ಮುಖಭಂಗ

ಬಿಜೆಪಿ ಹಿಂದಿನಿಂದಲೂ ಮಾದಕ ವಸ್ತು ಸಾಗಣೆ ಪ್ರಕರಣ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದೇ ಹೇಳುತ್ತಾ ಬಂದಿತ್ತು. ಕೇರಳ ಮಂತ್ರಿಗಳನ್ನು ಗುರಿಯಾಗಿಸಿ ಹಲವು ಬಾರಿ ಟೀಕೆ ಮಾಡಿತ್ತು.

ತಿರುವನಂತಪುರಂ: ಕೇರಳ ಬಿಜೆಪಿ ಸಂಸದ ಸುರೇಶ್ ಗೋಪಿ, 'ಮಾದಕ ವಸ್ತು ಜಿಹಾದ್' (Narcotics Jihad) ಪ್ರಕರಣದಲ್ಲಿ ಎಲ್ ಡಿ ಎಫ್ ಸರ್ಕಾರವನ್ನು ಬೆಂಬಲಿಸಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು. 

ಪತ್ರಕರ್ತರೊಡನೆ ಮಾತನಾಡುತ್ತಾ 'ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರತಿಯೊಂದು ವಿಷಯಕ್ಕೂ ಸ್ಪಷ್ಟನೆ ನೀಡಬೇಕಾದ ಅಗತ್ಯವಿಲ್ಲ' ಎಂದು ಸುರೇಶ್ ಗೋಪಿ ಹೇಳಿದ್ದರು. 

ಅಲ್ಲದೆ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋದ ಅವರು ಕೇರಳ ರಾಜ್ಯ ಸರ್ಕಾರ ಮತ್ತು ಸಂಸತ್ತು ಪ್ರಕರಣವನ್ನು ಜಾಣ್ಮೆಯಿಂದ ನಿಭಾಯಿಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಿ ಬಿಜೆಪಿ ಗೆ ತೀವ್ರ ಇರಿಸುಮುರಿಸು ಉಂಟುಮಾಡಿದ್ದರು.

ಬಿಜೆಪಿ ಹಿಂದಿನಿಂದಲೂ ಮಾದಕ ವಸ್ತು ಸಾಗಣೆ ಪ್ರಕರಣ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದೇ ಹೇಳುತ್ತಾ ಬಂದಿತ್ತು. ಕೇರಳ ಮಂತ್ರಿಗಳನ್ನು ಗುರಿಯಾಗಿಸಿ ಹಲವು ಬಾರಿ ಟೀಕೆ ಮಾಡಿತ್ತು. ಆದರೆ ಇದೀಗ ಅವರದೇ ಪಕ್ಷದ ಸಂಸದ ಕೇರಳ ರಾಜ್ಯ ಸರ್ಕಾರವನ್ನು ಬೆಂಬಲಿಸಿರುವುದು ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT