ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

ಸಿಧು 'ಡ್ರಾಮಾ ಮಾಸ್ಟರ್', ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ತಲುಪಲು ಹೆಣಗಾಡಲಿದೆ: ಪಂಜಾಬ್ ಮಾಜಿ ಸಿಎಂ ಅಮರೀಂದರ್

ಪಂಜಾಬ್ ಪ್ರದೇಶ ಕಾಂಗ್ರೆಸ್(ಪಿಪಿಸಿಸಿ) ಅಧ್ಯಕ್ಷ ನವಜೋತ್ ಸಿಧು ಅವರನ್ನು "ಸೂಪರ್ ಸಿಎಂ" ಎಂದು ಕರೆದಿರುವ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು, ಸಿಧು ಒಬ್ಬ 'ಡ್ರಾಮಾ ಮಾಸ್ಟರ್'.

ಚಂಡೀಗಢ: ಪಂಜಾಬ್ ಪ್ರದೇಶ ಕಾಂಗ್ರೆಸ್(ಪಿಪಿಸಿಸಿ) ಅಧ್ಯಕ್ಷ ನವಜೋತ್ ಸಿಧು ಅವರನ್ನು "ಸೂಪರ್ ಸಿಎಂ" ಎಂದು ಕರೆದಿರುವ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು, ಸಿಧು ಒಬ್ಬ 'ಡ್ರಾಮಾ ಮಾಸ್ಟರ್'. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ತಲುಪಲು ಹೆಣಗಾಡಲಿದೆ ಎಂದು ಬುಧವಾರ ಹೇಳಿದ್ದಾರೆ.

'ಇಂತಹ ಅಪಾಯಕಾರಿ ವ್ಯಕ್ತಿ (ಸಿಧು) ಯಿಂದ ದೇಶವನ್ನು ರಕ್ಷಿಸಲು ತಾನು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.

2022ರ ವಿಧಾನಸಭೆ ಚುನಾವಣೆಯಲ್ಲಿ ಸಿಧು ಅವರ ಸೋಲನ್ನು ಖಚಿತಪಡಿಸಿಕೊಳ್ಳಲು ಪಿಪಿಸಿಸಿ ಅಧ್ಯಕ್ಷರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಮಾಜಿ ಸಿಎಂ ಘೋಷಿಸಿದ್ದಾರೆ.

"ಅವರು (ಸಿದ್ದು) ರಾಜ್ಯಕ್ಕೆ ಅಪಾಯಕಾರಿ" ಎಂದಿರುವ ಅಮರೀಂದರ್ ಸಿಂಗ್, ತಮ್ಮದೇ ಸಚಿವಾಲಯವನ್ನು ನಿಭಾಯಿಸಲು ಸಾಧ್ಯವಾಗದ ಸಿಧು ಈಗ ಕ್ಯಾಬಿನೆಟ್ ಅನ್ನು ನಿರ್ವಹಿಸುತ್ತಿದ್ದಾರೆ. "ಸಿಧು ಸೂಪರ್ ಸಿಎಂ ಆಗಿ ವರ್ತಿಸಿದರೆ, ಪಕ್ಷ ಯಾವುದೇ ಕೆಲಸ ಮಾಡುವುದಿಲ್ಲ" ಎಂದು ಅವರು ಹೇಳಿದ್ದಾರೆ.

ಈ "ಡ್ರಾಮಾ ಮಾಸ್ಟರ್ ನಾಯಕತ್ವದಲ್ಲಿ", ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಅಂಕಿಗಳನ್ನು ತಲುಪಲು ಹೆಣಗಾಡಲಿದೆ ಎಂದು ಅಮರೀಂದರ್ ಸಿಂಗ್ ಅವರು ಸಿಧು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT