ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

ಸಿಧು 'ಡ್ರಾಮಾ ಮಾಸ್ಟರ್', ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ತಲುಪಲು ಹೆಣಗಾಡಲಿದೆ: ಪಂಜಾಬ್ ಮಾಜಿ ಸಿಎಂ ಅಮರೀಂದರ್

ಪಂಜಾಬ್ ಪ್ರದೇಶ ಕಾಂಗ್ರೆಸ್(ಪಿಪಿಸಿಸಿ) ಅಧ್ಯಕ್ಷ ನವಜೋತ್ ಸಿಧು ಅವರನ್ನು "ಸೂಪರ್ ಸಿಎಂ" ಎಂದು ಕರೆದಿರುವ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು, ಸಿಧು ಒಬ್ಬ 'ಡ್ರಾಮಾ ಮಾಸ್ಟರ್'.

ಚಂಡೀಗಢ: ಪಂಜಾಬ್ ಪ್ರದೇಶ ಕಾಂಗ್ರೆಸ್(ಪಿಪಿಸಿಸಿ) ಅಧ್ಯಕ್ಷ ನವಜೋತ್ ಸಿಧು ಅವರನ್ನು "ಸೂಪರ್ ಸಿಎಂ" ಎಂದು ಕರೆದಿರುವ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು, ಸಿಧು ಒಬ್ಬ 'ಡ್ರಾಮಾ ಮಾಸ್ಟರ್'. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ತಲುಪಲು ಹೆಣಗಾಡಲಿದೆ ಎಂದು ಬುಧವಾರ ಹೇಳಿದ್ದಾರೆ.

'ಇಂತಹ ಅಪಾಯಕಾರಿ ವ್ಯಕ್ತಿ (ಸಿಧು) ಯಿಂದ ದೇಶವನ್ನು ರಕ್ಷಿಸಲು ತಾನು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.

2022ರ ವಿಧಾನಸಭೆ ಚುನಾವಣೆಯಲ್ಲಿ ಸಿಧು ಅವರ ಸೋಲನ್ನು ಖಚಿತಪಡಿಸಿಕೊಳ್ಳಲು ಪಿಪಿಸಿಸಿ ಅಧ್ಯಕ್ಷರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಮಾಜಿ ಸಿಎಂ ಘೋಷಿಸಿದ್ದಾರೆ.

"ಅವರು (ಸಿದ್ದು) ರಾಜ್ಯಕ್ಕೆ ಅಪಾಯಕಾರಿ" ಎಂದಿರುವ ಅಮರೀಂದರ್ ಸಿಂಗ್, ತಮ್ಮದೇ ಸಚಿವಾಲಯವನ್ನು ನಿಭಾಯಿಸಲು ಸಾಧ್ಯವಾಗದ ಸಿಧು ಈಗ ಕ್ಯಾಬಿನೆಟ್ ಅನ್ನು ನಿರ್ವಹಿಸುತ್ತಿದ್ದಾರೆ. "ಸಿಧು ಸೂಪರ್ ಸಿಎಂ ಆಗಿ ವರ್ತಿಸಿದರೆ, ಪಕ್ಷ ಯಾವುದೇ ಕೆಲಸ ಮಾಡುವುದಿಲ್ಲ" ಎಂದು ಅವರು ಹೇಳಿದ್ದಾರೆ.

ಈ "ಡ್ರಾಮಾ ಮಾಸ್ಟರ್ ನಾಯಕತ್ವದಲ್ಲಿ", ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಅಂಕಿಗಳನ್ನು ತಲುಪಲು ಹೆಣಗಾಡಲಿದೆ ಎಂದು ಅಮರೀಂದರ್ ಸಿಂಗ್ ಅವರು ಸಿಧು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT