ಪ್ರಧಾನಿ ಮೋದಿ 
ದೇಶ

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿನ ನನ್ನ ಭಾಷಣ ಕೋವಿಡ್, ಭಯೋತ್ಪಾದನೆ ನಿಗ್ರಹವನ್ನು ಕೇಂದ್ರೀಕರಿಸಲಿದೆ: ಪ್ರಧಾನಿ ಮೋದಿ

ಭಾರತ-ಅಮೆರಿಕಾ ರಾಷ್ಟ್ರದ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಬಲಪಡಿಸಲು ಅಮೇರಿಕಾ ಭೇಟಿಯು ಒಂದು ಉತ್ತಮ ಸಂದರ್ಭವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ನವದೆಹಲಿ: ಭಾರತ-ಅಮೆರಿಕಾ ರಾಷ್ಟ್ರದ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಬಲಪಡಿಸಲು ಅಮೇರಿಕಾ ಭೇಟಿಯು ಒಂದು ಉತ್ತಮ ಸಂದರ್ಭವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ಬೈಡೆನ್ ಅಮೆರಿಕಾ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಮೆರಿಕಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಮೆರಿಕಾಕ್ಕೆ ಹೊರಡಲಿರುವ ಮೋದಿಯವರು, ಕ್ವಾಡ್‌ ಶೃಂಗ ಸಮ್ಮೇ​ಳನ, ವಿಶ್ವ​ಸಂಸ್ಥೆ 76ನೇ ವಾರ್ಷಿಕ ಸಾಮಾನ್ಯ ಸಭೆ​ಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜೋ ಬೈಡೆನ್‌ ಜತೆ ದ್ವಿಪಕ್ಷೀಯ ಮಾತು​ಕತೆಯನ್ನೂ ನಡೆಸಲಿದ್ದಾರೆ. ಹೀಗಾಗಿ ಮೋದಿ-ಬೈಡೆನ್ ಭೇಟಿ ಮಹತ್ವ ಪಡೆದುಕೊಂಡಿದೆ.

ಇದರಂತೆ ಇಂದು ಅಮೆರಿಕಾಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕೋವಿಡ್ -19 ಸಾಂಕ್ರಾಮಿಕ, ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ ಮತ್ತು ಇತರ ಪ್ರಮುಖ ವಿಚಾರಗಳನ್ನು ಕೇಂದ್ರೀಕರಿಸಿ ಭಾಷಣ ಮಾಡುವ ಮೂಲಕ ಭೇಟಿಯನ್ನು ಮುಕ್ತಾಯಗೊಳಿಸಲಿದ್ದೇನೆಂದು ಹೇಳಿದ್ದಾರೆ. 

ಅಮೇರಿಕಾ ಸಂಯುಕ್ತ ಸಂಸ್ಥಾನದ ಅತ್ಯುನ್ನತ ಅಧ್ಯಕ್ಷ ಜೋ ಬಿಡೆನ್ ಅವರ ಆಹ್ವಾನದ ಮೇರೆಗೆ 22-25 ಸೆಪ್ಟೆಂಬರ್ ರಂದು ಅಮೆರಿಕಾಗೆ ಭೇಟಿ ನೀಡುತ್ತೇನೆ. ಭೇಟಿ ವೇಳೆ ಗ್ಲೋಬಲ್ ಪಾರ್ಟನರ್​​ಶಿಪ್​​ ಬಗ್ಗೆ ಸಮಗ್ರವಾಗಿ ಅಧ್ಯಕ್ಷ ಜೋ ಬೈಡನ್​ ಜೊತೆ ಚರ್ಚಿಸುತ್ತೇನೆ. ಪರಸ್ಪರ ಆಸಕ್ತಿ ವಿಷಯಗಳ ಜೊತೆಗೆ ಗ್ಲೋಬಲ್ ಸಮಸ್ಯೆ ಮತ್ತು ಪ್ರಾದೇಶಿಕ ವಿಚಾರಗಳ ಬಗ್ಗೆ ವಿನಿಮಯ ಮಾಡಿಕೊಳ್ಳುವುದು. ಜೊತೆಗೆ ಯುಎಸ್​ಎ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್​ ಅವರ ಭೇಟಿಯನ್ನೂ ಕೂಡ ಎದುರು ನೋಡುತ್ತಿದ್ದೇನೆ. ಹ್ಯಾರಿಸ್ ಜೊತೆ ಜಾಗತಿಕ ವಿಚಾರಗಳು ಮತ್ತು ಎರಡು ದೇಶಗಳ ಪರಸ್ಪರ ಸಹಕಾರದ ಬಗ್ಗೆ ಚರ್ಚೆಯಾಗಲಿದೆ. ಜೊತೆಗೆ ಅಧ್ಯಕ್ಷ ಜೋ ಬೈಡನ್ ನೇತೃತ್ವದಲ್ಲಿ ನಡೆಯಲಿರುವ ಕ್ವಾಡ್​ ಶೃಂಗಸಭೆಯಲ್ಲೂ ಭಾಗಿಯಾಗಲಿದ್ದೇನೆ. ಇದೇ ಮೊದಲ ಬಾರಿಗೆ ಕ್ವಾಡ್​​ ಲೀಡರ್​ಗಳ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗಿಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಆಸ್ಟ್ರೇಲಿಯಾ ಪ್ರಧಾನಿ ಮ್ಯಾರಿಸನ್ ಹಾಗೂ ಜಪಾನ್ ಪ್ರಧಾನಿ ಸುಗಾ ಅವರನ್ನು ಭೇಟಿ ಮಾಡಲಿದ್ದು, ಉಭಯ ನಾಯಕರೊಂದಿಗೆ ದ್ವಿಪಕ್ಷೀಯ ಸಂಬಂಧಗಳ ಕುರಿತು ಮಾತುಕತೆ ನಡೆಸಲಾಗುತ್ತಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT