ಭಾರತೀಯ ಸೇನೆ (ಸಂಗ್ರಹ ಚಿತ್ರ) 
ದೇಶ

ಬಾರಾಮುಲ್ಲಾದಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಮೂವರು ಭಯೋತ್ಪಾದಕರ ಹತ್ಯೆ

ಭಾರತೀಯ ಸೇನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಉರಿಯ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದೆ. 

ಶ್ರೀನಗರ: ಭಾರತೀಯ ಸೇನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಉರಿಯ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದೆ. 

ಉಗ್ರರು ಸಂಗ್ರಹಿಸಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಪಡಿಸಿಕೊಂಡಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಒಸಿ ಬಳಿ ಹತ್ಲಾಂಗದಲ್ಲಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸುತ್ತಿದ್ದೆವು ಒಳನುಸುಳುವವರನ್ನು ತಡೆದು ಈ ಪೈಕಿ ಮೂವರನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.

5 ಅಸಾಲ್ಟ್ ರೈಫಲ್ ಗಳು, 7 ಪಿಸ್ತೂಲ್ ಗಳು, ಗ್ರೆನೇಡ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಘಟನೆ ಬಗ್ಗೆ ಮಾಧ್ಯಮಗಳೊಂದಿಗೆ ಸೇನಾ ಚಿನಾರ್ ಕಾರ್ಪ್ಸ್ ನಲ್ಲಿ ಮಾತನಾಡಿರುವ ಸೇನಾ ಅಧಿಕಾರಿ ಲೆಫ್ಟಿನೆಂಟ್ ಜನರಲ್ ಡಿಪಿ ಪಾಂಡೆ ಲಾಂಚ್ ಪ್ಯಾಡ್ ಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಟುವಟಿಕೆಗಳು ಹೆಚ್ಚಾಗಿದೆ ಎಂದು ಹೇಳಿದ್ದಾರೆ. 

"ವರ್ಷದ ಪ್ರಾರಂಭದಿಂದಲೂ ಒಳನುಸುಳುವಿಕೆ ವರದಿಯಾಗಿರಲಿಲ್ಲ. ಆದರೆ ಪಾಕಿಸ್ತಾನದ ಸೇನಾ ಕಮಾಂಡರ್ ಗಳ ಗಮನಕ್ಕೆ ಬಾರದೇ ಲಾಂಚ್ ಪ್ಯಾಡ್ ಗಳಲ್ಲಿ ಚಟುವಟಿಕೆ ನಡೆಯುವುದಕ್ಕೆ ಸಾಧ್ಯವಿಲ್ಲ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ SIR ಪ್ರಯೋಗ: ಮೊದಲ ಹಂತದಲ್ಲಿ ಬಂಗಾಳ, ಕೇರಳ, ತಮಿಳುನಾಡು; ನಾಳೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಠಿ

'ಇಂಡಿ ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆ ಕಸದ ಬುಟ್ಟಿಗೆ ಎಸೆಯುತ್ತೇವೆ': ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್

Cricket: 'ಕೊನೆಯ ವಿದಾಯ ಸಿಡ್ನಿ..'; ರೋಹಿತ್ ಶರ್ಮಾ ಭಾವನಾತ್ಮಕ ಪೋಸ್ಟ್; ವಿಶ್ವಕಪ್ ಗೆ ಡೌಟ್!

ಮಹಾರಾಷ್ಟ್ರ ವೈದ್ಯೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 'ಆಕೆಯೇ S**x ಗೆ ಪೀಡಿಸುತ್ತಿದ್ದಳು' ಎಂದ ಆರೋಪಿ!

Ranji Trophy: ಹೊರಬಿದ್ದ ಬಳಿಕ ಕರುಣ್ ನಾಯರ್ ಅಬ್ಬರದ ಶತಕ; ಮತ್ತೆ ಟೀಂ ಇಂಡಿಯಾ ರೇಸ್ ನಲ್ಲಿ ಕನ್ನಡಿಗ!

SCROLL FOR NEXT