ಪಶ್ಚಿಮ ಬಂಗಾಳ ಸಚಿವ ಫಿರ್ಹಾದ್ ಹಕ್ಕೀಂ 
ದೇಶ

ಬಿಜೆಪಿಯ ದೊಡ್ಡ ನಾಯಕರೊಬ್ಬರು ಶೀಘ್ರದಲ್ಲಿಯೇ ಟಿಎಂಸಿಗೆ ಸೇರ್ಪಡೆ: ಬಂಗಾಳ ಸಚಿವ ಫಿರ್ಹಾದ್ ಹಕೀಂ

ಕೆಲವೇ ದಿನಗಳಲ್ಲಿ ಬಿಜೆಪಿಯಿಂದ ದೊಡ್ಡ ನಾಯಕರೊಬ್ಬರು ಟಿಎಂಸಿ ಸೇರ್ಪಡೆಗೆ ವೇದಿಕೆ ಸಜ್ಜಾಗಿದೆ ಎಂದು ಹಿರಿಯ ತೃಣಮೂಲ ಕಾಂಗ್ರೆಸ್ ಮುಖಂಡ ಫಿರ್ಹಾದ್ ಹಕೀಂ ಗುರುವಾರ ತಿಳಿಸಿದ್ದಾರೆ. ಕೇಸರಿ ಪಕ್ಷ ರಾಜ್ಯದಲ್ಲಿ ವಿಭಜನೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಕೊಲ್ಕತ್ತಾ: ಕೆಲವೇ ದಿನಗಳಲ್ಲಿ ಬಿಜೆಪಿಯಿಂದ ದೊಡ್ಡ ನಾಯಕರೊಬ್ಬರು ಟಿಎಂಸಿ ಸೇರ್ಪಡೆಗೆ ವೇದಿಕೆ ಸಜ್ಜಾಗಿದೆ ಎಂದು ಹಿರಿಯ ತೃಣಮೂಲ ಕಾಂಗ್ರೆಸ್ ಮುಖಂಡ ಫಿರ್ಹಾದ್ ಹಕೀಂ ಗುರುವಾರ ತಿಳಿಸಿದ್ದಾರೆ. ಕೇಸರಿ ಪಕ್ಷ ರಾಜ್ಯದಲ್ಲಿ ವಿಭಜನೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಸೆಪ್ಟೆಂಬರ್ 30 ರ ಬಾಭನಿಪುರ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪರವಾಗಿ ಪ್ರಚಾರದಲ್ಲಿ ನಿರತರಾಗಿದ್ದ ಹಕೀಂ,  ಪಕ್ಷವು ಬಿಜೆಪಿ ನಾಯಕರನ್ನು ಮನಬಂದಂತೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿಲ್ಲ ಎಂದು ಹೇಳಿದರು.

ಟಿಎಂಸಿಗೆ ಸೇರ್ಪಡೆಯಾಗಬಯಸುವ ಬಿಜೆಪಿ ನಾಯಕರ ಪೂರ್ವಪರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಮಾತುಕತೆಯ ನಂತರ ಅವರ ಮನವಿ ಬಗ್ಗೆ ನಿರ್ಧರಿಸಲಾಗುತ್ತಿದೆ ಎಂದು ಬ್ಯಾನರ್ಜಿ ಸಂಪುಟದ ಹಿರಿಯ ಸಚಿವರು ಆಗಿರುವ ಹಕ್ಕೀಂ  ತಿಳಿಸಿದರು.

ಬ್ಯಾನರ್ಜಿ ನೇತೃತ್ವದಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಅಧಿಕಾರಕ್ಕೆ ಬಂದ ನಂತರ ಪಶ್ಚಿಮ ಬಂಗಾಳದಲ್ಲಿ ಹಲವು ಬಿಜೆಪಿ ನಾಯಕರು ಟಿಎಂಸಿಗೆ ಸೇರ್ಪಡೆಯಾಗುತ್ತಿದ್ದಾರೆ.

 ಮುಕುಲ್ ರಾಯ್ ಹಾಗೂ ಬಾಬುಲ್ ಸುಪ್ರಿಯೋ ಬಿಜೆಪಿಯಿಂದ ಟಿಎಂಸಿ ಸೇರ್ಪಡೆಯಾದ ನಂತರ ಮತ್ತಷ್ಟು ಮಂದಿ ಬಿಜೆಪಿಯಿಂದ  ಬರುವ ಕುರಿತಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಹಕ್ಕೀಂ  ಕೆಲ ದಿನಗಳವರೆಗೂ ಕಾಯಿರಿ, ಬಿಜೆಪಿಯ ದೊಡ್ಡ ನಾಯಕರೊಬ್ಬರು ಟಿಎಂಸಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು. ಆದರೆ, ಹೆಚ್ಚಿನ ವಿವರ ಬಹಿರಂಗಪಡಿಸಲು ನಿರಾಕರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT