ಸುಪ್ರೀಂ ಕೋರ್ಟ್ 
ದೇಶ

ಭಾರತ ಮಾಡಿದ್ದನ್ನು ಬೇರೆ ಯಾವುದೇ ದೇಶ ನಿರ್ವಹಿಸಲು ಸಾಧ್ಯವಾಗಲಿಲ್ಲ: ಕೊವಿಡ್ ಪರಿಹಾರ ಯೋಜನೆ ಶ್ಲಾಘಿಸಿದ 'ಸುಪ್ರೀಂ'

ಕೋವಿಡ್ ಸಾಂಕ್ರಾಮಿಕದಿಂದ ತಮ್ಮ ಆಪ್ತರನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿರುವ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಲು ಮುಂದಾಗಿದ್ದು, ಇದಕ್ಕೆ ಸ್ವತಃ ಸುಪ್ರೀಂ ಕೋರ್ಟ್ ಕೂಡ ಶ್ಲಾಘನೆ ವ್ಯಕ್ತಪಡಿಸಿದೆ.

ನವದೆಹಲಿ: ಕೋವಿಡ್ ಸಾಂಕ್ರಾಮಿಕದಿಂದ ತಮ್ಮ ಆಪ್ತರನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿರುವ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಲು ಮುಂದಾಗಿದ್ದು, ಇದಕ್ಕೆ ಸ್ವತಃ ಸುಪ್ರೀಂ ಕೋರ್ಟ್ ಕೂಡ ಶ್ಲಾಘನೆ ವ್ಯಕ್ತಪಡಿಸಿದೆ.

ಹೌದು.. ಕೋವಿಡ್ ಸಾಂಕ್ರಾಮಿಕಕ್ಕೆ ಪ್ರತಿಕ್ರಿಯೆಯಾಗಿ ಭಾರತವು ಮಾಡಿದ್ದನ್ನು ಬೇರೆ ಯಾವುದೇ ದೇಶವು ನಿರ್ವಹಿಸಲು ಸಾಧ್ಯವಾಗಲಿಲ್ಲ ಎಂದು ಹೇಳುವ ಮೂಲಕ ಸುಪ್ರೀಂಕೋರ್ಟ್ ಗುರುವಾರ ಸರ್ಕಾರದ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತಪಡಿಸಿದೆ. ಅದೇ ವೇಳೆ ಕೊವಿಡ್-19 ಸಾವಿಗೆ ಪ್ರಸ್ತಾಪಿಸಿದ 50,000 ರೂ ಪರಿಹಾರ ಪ್ರಕರಣದ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ. 

ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂಆರ್ ಶಾ ಮತ್ತು ಎಎಸ್ ಬೋಪಣ್ಣ ಅವರ ಪೀಠ, 'ಇಂದು ನಾವು ತುಂಬಾ ಸಂತೋಷವಾಗಿದ್ದೇವೆ. ತೊಂದರೆ ಅನುಭವಿಸಿದ ವ್ಯಕ್ತಿಗಳಿಗೆ ಸ್ವಲ್ಪ ಸಾಂತ್ವನ ಸಿಗುತ್ತದೆ. ಸರ್ಕಾರ ನಡೆಸುತ್ತಿರುವ ಎಲ್ಲ ಕಾರ್ಯದ ಬಗ್ಗೆಯೂ ಖುಷಿಯಾಗಿದೆ. ಬಳಲುತ್ತಿರುವ ವ್ಯಕ್ತಿಯ ಕಣ್ಣೀರು ಒರೆಸಲು ಏನಾದರೂ ಮಾಡಲಾಗುತ್ತಿದೆ ಎಂದು ನಮಗೆ ಸಂತೋಷವಾಗಿದೆ ಎಂದು ಹೇಳಿತು. 

ಅಂತೆಯೇ ನಮ್ಮ ಜನಸಂಖ್ಯೆಯ ಗಾತ್ರ, ಲಸಿಕೆ ವೆಚ್ಚಗಳು, ಆರ್ಥಿಕ ಪರಿಸ್ಥಿತಿ ಮತ್ತು ನಾವು ಎದುರಿಸಿದ ಪ್ರತಿಕೂಲ ಸನ್ನಿವೇಶಗಳನ್ನು ಗಮನಿಸಿದರೆ ನಾವು ಅನುಕರಣೀಯ ಕ್ರಮಗಳನ್ನು ಕೈಗೊಂಡಿದ್ದೇವೆ. ಭಾರತ ಮಾಡಿದ್ದನ್ನು ಬೇರೆ ಯಾವ ದೇಶವೂ ಮಾಡಲು ಸಾಧ್ಯವಾಗಲಿಲ್ಲ. ಎರಡನೇ ಅಲೆಗೆ ಸನ್ನದ್ಧತೆಯ ಕೊರತೆ ಮತ್ತು ವೈದ್ಯಕೀಯ ಆಮ್ಲಜನಕದಂತಹ ಅಗತ್ಯತೆಗಳ ಕೊರತೆಯಿಂದಾಗಿ ಸಾವಿರಾರು ಸಾವುಗಳ ಮೇಲೆ ತೀವ್ರ ಪರಿಶೀಲನೆ ನಡೆಸಿದ ಕೊರೊನಾವೈರಸ್ ಸಾಂಕ್ರಾಮಿಕ ರೋಗಕ್ಕೆ ಭಾರತದ ಪ್ರತಿಕ್ರಿಯೆಯನ್ನು ನ್ಯಾಯಮೂರ್ತಿಗಳಾದ ಶಾ ಮತ್ತು ಎಎಸ್ ಬೋಪಣ್ಣ ಶ್ಲಾಘಿಸಿದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ಕೊವಿಡ್-19 ನಿಂದ ಮೃತಪಟ್ಟವರ ಕುಟುಂಬಕ್ಕೆ 50,000 ರೂ ಪರಿಹಾರ ನೀಡಬೇಕೆಂದು ಶಿಫಾರಸು ಮಾಡಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಸಾಂಕ್ರಾಮಿಕ ರೋಗವನ್ನು ಎದುರಿಸಲು ಸನ್ನದ್ಧತೆಗೆ ಸಂಬಂಧಿಸಿದ ಕೊವಿಡ್-19 ಪರಿಹಾರ ಕಾರ್ಯಾಚರಣೆಗಳು ಅಥವಾ ಚಟುವಟಿಕೆಗಳಲ್ಲಿ ಭಾಗಿಯಾಗಿ ವೈರಸ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ನೀಡಲಾಗುವುದು ಎಂದು ಅದು ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT