ಪ್ರಶಾಂತ್ ಕಿಶೋರ್ 
ದೇಶ

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಗೆ ಬರುವುದಾದರೆ ಸ್ವಾಗತ; ಮಹತ್ವದ ಸ್ಥಾನ ಕೊಟ್ಟರೂ ಓಕೆ: ವೀರಪ್ಪ ಮೊಯ್ಲಿ

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುವುದಾಗಿ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಗುರುವಾರ ಹೇಳಿದ್ದಾರೆ. ಪ್ರಶಾಂತ್ ಕಿಶೋರ್ ಗೆ ಪಕ್ಷದಲ್ಲಿ ಮಹತ್ವದ ಸ್ಥಾನ ಕೊಟ್ಟರೂ ಒಪ್ಪುವುದಾಗಿ ತಿಳಿಸಿದ್ದಾರೆ.

ಬೆಂಗಳೂರು: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುವುದಾಗಿ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಗುರುವಾರ ಹೇಳಿದ್ದಾರೆ. ಪ್ರಶಾಂತ್ ಕಿಶೋರ್ ಗೆ ಪಕ್ಷದಲ್ಲಿ ಮಹತ್ವದ ಸ್ಥಾನ ಕೊಟ್ಟರೂ ಒಪ್ಪುವುದಾಗಿ ತಿಳಿಸಿದ್ದಾರೆ.

ಪ್ರಶಾಂತ್ ಕಿಶೋರ್ ಶೇಕಡಾ 99 ರಷ್ಟು ಯಶಸ್ಸು ರೆಟಿಂಗ್ ನೊಂದಿಗೆ ಚುನಾವಣಾ ತಂತ್ರಜ್ಞರಾಗಿದ್ದಾರೆ. ಅವರು ಸ್ವಯಂ ಪ್ರೇರಿತರಾಗಿ ನಮಗೆ ಸಹಕರಿಸಿದ್ದಾರೆ. ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆ ಕುರಿತ ಪ್ರಕ್ರಿಯೆ ಮುಂದುವರೆದಿದೆ ಎಂದು ಮೊಯ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪ್ರಶಾಂತ್ ಕಿಶೋರ್ ಮತ್ತಿತರ ಆಂತರಿಕ ಸುಧಾರಣಾಗಾರರು ಬರುವುದರಿಂದ ಪಕ್ಷ ಪುನಶ್ಚೇತನಗೊಳ್ಳಲಿದೆ ಎಂದು ಹೇಳಿದ ಮೊಹ್ಲಿ, ನಿರಂತರವಾಗಿ ಅವರೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿದರು.

ಪಂಜಾಬ್ ನಲ್ಲಿ ಹಠಾತ್ತನೆ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಪ್ರತಿಕ್ರಿಯಿಸಿದ ವೀರಪ್ಪ ಮೊಯ್ಲಿ, ಪರಿಸ್ಥಿತಿಯನ್ನು ಪಕ್ಷ ಅತ್ಯುತ್ತಮವಾಗಿ ನಿಭಾಯಿಸಿದೆ ಎಂದರು. ಮುಖ್ಯಮಂತ್ರಿ ಸ್ಥಾನದಿಂದ ಇಳಿದು ರಾಜ್ಯದ ನಾಯಕತ್ವವನ್ನು ಚರಣ್ ಜಿತ್ ಸಿಂಗ್ ಛನಿ ಅವರಿಗೆ ವಹಿಸಿಕೊಟ್ಟ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಮೊಯ್ಲಿ ಹೊಗಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT