ಶೂಟೌಟ್ ವಿಡಿಯೋ 
ದೇಶ

ದೆಹಲಿ ಕೋರ್ಟ್ ಆವರಣದಲ್ಲಿ ಶೂಟೌಟ್ ಪ್ರಕರಣ: ಗೋಗಿ, ಟಿಲ್ಲು ಗ್ಯಾಂಗ್ ಸದಸ್ಯರಿರುವ ಜೈಲಿನಲ್ಲಿ ಹೆಚ್ಚಿದ ಭದ್ರತೆ!

ದೆಹಲಿ ಕೋರ್ಟ್ ಆವರಣದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಗಿ ಹಾಗೂ ಟಿಲ್ಲು ಗ್ಯಾಂಗ್ ಸದಸ್ಯರಿರುವ ಜೈಲಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ. 

ನವದೆಹಲಿ: ದೆಹಲಿ ಕೋರ್ಟ್ ಆವರಣದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಗಿ ಹಾಗೂ ಟಿಲ್ಲು ಗ್ಯಾಂಗ್ ಸದಸ್ಯರಿರುವ ಜೈಲಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ. 

ದೆಹಲಿಯ ರೋಹಿಣಿ ಕೋರ್ಟ್ ಆವರಣವದಲ್ಲಿ ನಿನ್ನೆಯಷ್ಟೇ ಶೂಟೌಟ್ ನಡೆದಿತ್ತು.  ದಿಲ್ಲಿಯ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಗ್ಯಾಂಗ್‌ಸ್ಟರ್ ಜಿತೇಂದ್ರ ಗೋಗಿ ಹಾಗೂ ಇತರೆ ಮೂವರು ಶೂಟೌಟ್ ನಲ್ಲಿ ಸಾವನ್ನಪ್ಪಿದ್ದರು.

ಇದನ್ನೂ ಓದಿ: ದೆಹಲಿಯ ರೋಹಿಣಿ ಕೋರ್ಟ್ ನಲ್ಲಿ ಶೂಟೌಟ್: ಗ್ಯಾಂಗ್ ಸ್ಟರ್ ಜಿತೇಂದರ್ ಮನ್ 'ಗೋಗಿ' ಸೇರಿ ನಾಲ್ವರ ಸಾವು
 
ಗ್ಯಾಂಗ್‌ಸ್ಟರ್ ಜಿತೇಂದ್ರನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ರೋಹಿಣಿ ಕೋರ್ಟ್ 206 ನೇ ಸಂಖ್ಯೆ ಕರೆದುಕೊಂಡು ಬರುವಾಗ ದಾಳಿ ನಡೆದಿತ್ತು. 

ವಕೀಲರ ದಿರಿಸಿನಲ್ಲಿ ಬಂದಿದ್ದ ದಾಳಿಕೋರರು, ಜಿತೇಂದ್ರನ ಮೇಲೆ ಗುಂಡಿನ ದಾಳಿ ನಡೆಸಿ ಆತನನ್ನು ಸ್ಥಳದಲ್ಲಿಯೇ ಹತ್ಯೆ ಮಾಡಿದ್ದರು. ಕೂಡಲೇ ಪ್ರತಿ ದಾಳಿ ನಡೆಸಿದ ದಿಲ್ಲಿ ವಿಶೇಷ ಘಟಕದ ಪೊಲೀಸರು ಇಬ್ಬರು ದಾಳಿಕೋರರನ್ನು ಹತ್ಯೆ ಮಾಡಿದ್ದರು. ದಾಳಿಕೋರರನ್ನು ಜಿತೇಂದ್ರನ ವೈರಿ ಗ್ಯಾಂಗ್ ಟಿಲ್ಲು ತಾಜ್‌ಪೂರಿಯಾಕ್ಕೆ ಸೇರಿದವರು ಎಂದು ಹೇಳಲಾಗುತ್ತಿದೆ. 

ಘಟನೆ ಸಂಬಂಧ ಗೋಗಿ ಹಾಗೂ ಟಿಲ್ಲು ಗ್ಯಾಂಗ್ ಸದಸ್ಯರನ್ನು ಇರಿಸಿರುವ ಜೈಲುಗಳಿಗೆ ಇದೀಗ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT