ಸಿಜಿಐ ಎನ್ ವಿ ರಮಣ 
ದೇಶ

ದಯೆಯಲ್ಲ, ಅದು ನಿಮ್ಮ ಹಕ್ಕು: ನ್ಯಾಯಾಂಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಕೇಳುವಂತೆ ಸಿಜೆಐ ಎನ್‌.ವಿ ರಮಣ ಸಲಹೆ

ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕಲ್ಪಿಸಬೇಕಾದ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ಕಲ್ಪಿಸಬೇಕಾದ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಕಾನೂನು ಕಾಲೇಜುಗಳಲ್ಲಿ ಸಹ ಇದೇ ರೀತಿಯ ಮೀಸಲಾತಿಯ ಅಗತ್ಯವಿದೆ ಎಂದು ಅವರು ಹೇಳಿದರು. ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಒಂಬತ್ತು ಹೊಸದಾಗಿ ನೇಮಕಗೊಂಡ ನ್ಯಾಯಮೂರ್ತಿಗಳಿಗೆ  ಆಯೋಜಿಸಿದ್ದ    ಅಭಿನಂದನಾ ಸಮಾರಂಭದಲ್ಲಿ ಮಹಿಳಾ ನ್ಯಾಯಮೂರ್ತಿಗಳನ್ನು ಉದ್ದೇಶಿಸಿ  ನ್ಯಾ.ಎನ್.ವಿ.ರಮಣ ಮಾತನಾಡಿದರು. 

"ಮೀಸಲಾತಿ ನಿಮ್ಮ ಹಕ್ಕು. ಮೀಸಲಾತಿಗೆ ಆಗ್ರಹಿಸಲು ನೀವು ಅರ್ಹರು" ಎಂದು ಹೇಳಿದರು. "ಕೆಳ ನ್ಯಾಯಾಲಯಗಳಲ್ಲಿ ಮಹಿಳಾ ನ್ಯಾಯಾಧೀಶರು  ಶೇಕಡಾ 30 ಕ್ಕಿಂತ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಹೈಕೋರ್ಟ್‌ಗಳಲ್ಲಿ ಈ  ಪ್ರಮಾಣ ಶೇ.11.5 ರಷ್ಟಿದೆ. ಸುಪ್ರೀಂ ಕೋರ್ಟ್‌ನಲ್ಲಿ  ಶೇ. 11-12 ರಷ್ಟು  ಮಾತ್ರ ಎಂದು ಹೇಳಿದರು. ನ್ಯಾಯಾಂಗದಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿಯ ಅಗತ್ಯವಿದೆ. ಇದು ಸಾವಿರಾರು ವರ್ಷಗಳಿಂದ   ತುಳಿತಕ್ಕೊಳಗಾಗಿರುವವರ ಸಮಸ್ಯೆ ಎಂದು ಹೇಳಿದರು. "ದೇಶದಲ್ಲಿ  1.7  ದಶಲಕ್ಷ  ವಕೀಲರಿದ್ದರೂ ಅವರಲ್ಲಿ  ಶೇ.15 ರಷ್ಟು ಮಾತ್ರ ಮಹಿಳೆಯರು. ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಆಯ್ಕೆಯಾಗುವ ಮಹಿಳಾ ಜನಪ್ರತಿನಿಧಿಗಳು  ಕೇವಲ ಶೇ.2 ರಷ್ಟು ಮಾತ್ರ. ಬಾರ್ ಕೌನ್ಸಿಲ್ ಆಫ್ ಇಂಡಿಯಾದ ರಾಷ್ಟ್ರೀಯ ಸಮಿತಿಯಲ್ಲಿ ಮಹಿಳಾ ಪ್ರತಿನಿಧಿ ಏಕಿಲ್ಲ ಎಂಬುದು ನನ್ನ ಪ್ರಶ್ನೆಯಾಗಿದೆ ಎಂದು ಹೇಳಿದರು. 

ಈ ಸಮಸ್ಯೆಗಳು ಆದಷ್ಟು  ಶೀಘ್ರ  ಪರಿಹಾರವಾಗಲಿದೆ  ಎಂದು ನ್ಯಾ. ಎನ್ ವಿ ರಮಣ ಆಶಯ ವ್ಯಕ್ತಪಡಿಸಿದ್ದಾರೆ. ಮಹಿಳಾ ವಕೀಲರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದ ಅವರು, ಕೆಲಸದ ಸ್ಥಳಗಳಲ್ಲಿ ಅಹಿತಕರ  ವಾತಾವರಣ. ಮಹಿಳಾ ಶೌಚಾಲಯಗಳು, ಮಕ್ಕಳ ಆರೈಕೆ ಕೇಂದ್ರಗಳ ಕುರಿತು ಚರ್ಚಿಸಿದರು. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದರು. ಇಂದು ಹೆಣ್ಣು ಮಕ್ಕಳ ದಿನಾಚರಣೆ  ಅಂಗವಾಗಿ ಮಹಿಳೆಯರಿಗೆ ಮುಖ್ಯನ್ಯಾಯಮೂರ್ತಿ ಶುಭಾಶಯ ಕೋರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT