ವಿಎಂ ಸುಧೀರನ್ 
ದೇಶ

ಕೇರಳ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ, ಎಐಸಿಸಿಗೆ ವಿಎಂ ಸುಧೀರನ್ ರಾಜೀನಾಮೆ

ಇತ್ತೀಚಿಗಷ್ಟೇ ಕೆಪಿಸಿಸಿ ರಾಜಕೀಯ ವ್ಯವಹಾರಗಳ ಸಮಿತಿ(ಪಿಎಸಿ)ಗೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ವಿ ಎಂ ಸುಧೀರನ್ ಅವರು ಸೋಮವಾರ ಅಖಿಲ ಭಾರತ ಕಾಂಗ್ರೆಸ್ ಸಮಿತಿಗೂ ಗುಡ್ ಬೈ ಹೇಳಿದ್ದಾರೆ.

ತಿರುವನಂತಪುರಂ: ಇತ್ತೀಚಿಗಷ್ಟೇ ಕೆಪಿಸಿಸಿ ರಾಜಕೀಯ ವ್ಯವಹಾರಗಳ ಸಮಿತಿ(ಪಿಎಸಿ)ಗೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ವಿ ಎಂ ಸುಧೀರನ್ ಅವರು ಸೋಮವಾರ ಅಖಿಲ ಭಾರತ ಕಾಂಗ್ರೆಸ್ ಸಮಿತಿಗೂ ಗುಡ್ ಬೈ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ನಾಯಕತ್ವವು ಭಾನುವಾರ ಪಿಎಸಿಗೆ ರಾಜೀನಾಮೆ ನೀಡದಂತೆ ಸುಧೀರನ್ ಅವರನ್ನು ತಡೆಯಲು ಪ್ರಯತ್ನಿಸಿತ್ತು. ಆದರೆ 24 ಗಂಟೆಗಳಲ್ಲಿ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಸುಧೀರನ್ ಅವರು ಕೇಂದ್ರ ಸಮಿತಿಯಿಂದಲೂ ಹೊರನಡೆಯಲು ನಿರ್ಧರಿಸಿದ್ದಾರೆ. 

ಸುಧೀರನ್ ಅವರನ್ನು ಸಮಾಧಾನಪಡಿಸಲು ಕೇರಳ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತಾರಿಕ್ ಅನ್ವರ್ ಪ್ರಯತ್ನ ನಡೆಸುತ್ತಿದ್ದಾರೆ. ಅನ್ವರ್ ಅವರು ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುಲ್ಲಪಲ್ಲಿ ರಾಮಚಂದ್ರನ್ ಅವರನ್ನು ಸಹ ಸಮಾಧಾನಪಡಿಸಲು ಯತ್ನಿಸುತ್ತಿದ್ದಾರೆ.

ಸಾಂಸ್ಥಿಕ ನವೀಕರಣದ ಬಗ್ಗೆ ತಮ್ಮೊಂದಿಗೆ ಮಾತುಕತೆ ನಡೆಸದ ಕಾರಣಕ್ಕಾಗಿ ಸುಧೀರನ್ ಅವರು ರಾಜ್ಯ ಕಾಂಗ್ರೆಸ್ ನಾಯಕತ್ವದೊಂದಿಗೆ ಮುನಿಸಿಕೊಂಡಿದ್ದು, ಕಳೆದ ಶನಿವಾರ 21 ಸದಸ್ಯರ ಕೆಪಿಸಿಸಿಯ ಉನ್ನತ ಅಧಿಕಾರ ಸಮತಿಯಾದ ರಾಜಕೀಯ ವ್ಯವಹಾರಗಳ ಸಮಿತಿ(ಪಿಎಸಿ)ಗೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT