ಬಿಜೆಪಿ ಮುಖಂಡ ದಿಲೀಪ್ ಘೋಷ್ ಮತ್ತು ಟಿಎಂಸಿ ಬೆಂಬಲಿಗರ ನಡುವೆ ಘರ್ಷಣೆ ಚಿತ್ರ 
ದೇಶ

ಭವಾನಿಪುರ ಉಪ ಚುನಾವಣೆ: ಮತದಾನದ ದಿನ ಸೆಕ್ಷನ್ 144, ಕೇಂದ್ರಿಯ ಪಡೆ ನಿಯೋಜನೆಗೆ ಬಿಜೆಪಿ ಒತ್ತಾಯ

ಉಪ ಚುನಾವಣೆ ನಡೆಯಲಿರುವ ಸೆಪ್ಟೆಂಬರ್ 30 ರಂದು ಭವಾನಿಪುರ ಕ್ಷೇತ್ರದಲ್ಲಿ ಸೆಕ್ಷನ್ 144 ಜಾರಿಗೊಳಿಸಬೇಕು ಹಾಗೂ ಪ್ರತಿಯೊಂದು ಮತಗಟ್ಟೆಗಳಲ್ಲಿ ಕೇಂದ್ರಿಯ ಪ್ಯಾರಾಮಿಲಿಟರಿ ಪಡೆ ನಿಯೋಜಿಸಬೇಕೆಂದು ಬಿಜೆಪಿ ನಿಯೋಗವೊಂದು ಸೋಮವಾರ ಪಶ್ಚಿಮ ಬಂಗಾಳ ಮುಖ್ಯ ಚುನಾವಣಾಧಿಕಾರಿಗಳನ್ನು ಒತ್ತಾಯಿಸಿ, ಮನವಿ ಸಲ್ಲಿಸಿದೆ.

ಕೊಲ್ಕತ್ತಾ: ಬಿಜೆಪಿ ಪಕ್ಷದ ಮುಖಂಡರ ಮೇಲೆ ದಾಳಿ ಆರೋಪದ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯಲಿರುವ ಸೆಪ್ಟೆಂಬರ್ 30 ರಂದು ಭವಾನಿಪುರ ಕ್ಷೇತ್ರದಲ್ಲಿ ಸೆಕ್ಷನ್ 144 ಜಾರಿಗೊಳಿಸಬೇಕು ಹಾಗೂ ಪ್ರತಿಯೊಂದು ಮತಗಟ್ಟೆಗಳಲ್ಲಿ ಕೇಂದ್ರಿಯ ಪ್ಯಾರಾಮಿಲಿಟರಿ ಪಡೆ ನಿಯೋಜಿಸಬೇಕೆಂದು ಬಿಜೆಪಿ ನಿಯೋಗವೊಂದು ಸೋಮವಾರ ಪಶ್ಚಿಮ ಬಂಗಾಳ ಮುಖ್ಯ ಚುನಾವಣಾಧಿಕಾರಿಗಳನ್ನು ಒತ್ತಾಯಿಸಿ, ಮನವಿ ಸಲ್ಲಿಸಿದೆ.

ಮುಕ್ತ ಮತ್ತು ನ್ಯಾಯಸಮ್ಮತವಾದ ಮತದಾನವನ್ನು ಖಚಿತಪಡಿಸಿಕೊಳ್ಳಲು ಮತದಾನದ ದಿನದಂದು ಕ್ಷೇತ್ರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕೋಲ್ಕತ್ತಾ ಪೊಲೀಸರ ನೇರ ನಿಯಂತ್ರಣವನ್ನು ಅನುಮತಿಸಬಾರದು ಎಂದು ಬಿಜೆಪಿ ನಿಯೋಗವು ಸಿಇಒ ಆರಿಫ್ ಅಫ್ತಾಬ್ ಅವರನ್ನು ಒತ್ತಾಯಿಸಿದೆ.

ಪಕ್ಷದ ಬರಾಕ್‌ಪುರ್ ಸಂಸದ ಅರ್ಜುನ್ ಸಿಂಗ್ ಅವರು ಭವಾನಿಪುರದ ಹನುಮಾನ್ ಮಂದಿರದ ಬಳಿ ಹಗಲಿನಲ್ಲಿ ಹೇಗೆ ಅಣಕಿಸಿಲಾಯಿತು ಮತ್ತು ಪ್ರಚಾರ ಮಾಡದೆ ಹೇಗೆ ಹಿಂತಿರುಗಬೇಕಾಯಿತು ಎಂಬುದನ್ನು ಬಿಜೆಪಿ ಸಿಇಒಗೆ ತಿಳಿಸಿದೆ ಎಂದು ರಾಜ್ಯಸಭಾ ಸಂಸದ ಸ್ವಪನ್ ದಾಸ್ ಗುಪ್ತ ಸುದ್ದಿಗಾರರಿಗೆ ತಿಳಿಸಿದರು.

ಎರಡನೇ ಘಟನೆಯಲ್ಲಿ, ಪಕ್ಷದ ಮಾಜಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಮೇಲೆ ನಡೆದ ದಾಳಿಯನ್ನು ಸಹ ಮುಖ್ಯ ಚುನಾವಣಾ ಆಯುಕ್ತರಿಗೆ ತಿಳಸಲಾಗಿದೆ ಎಂದು ಅವರು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT