ಸಾಂದರ್ಭಿಕ ಚಿತ್ರ 
ದೇಶ

ಶಸ್ತ್ರಾಸ್ತ್ರ ಕಾರ್ಖಾನೆ ಮಂಡಳಿ ರದ್ದುಪಡಿಸಿದ ರಕ್ಷಣಾ ಸಚಿವಾಲಯ; ಉದ್ಯೋಗಿಗಳು, ಆಸ್ತಿಗಳನ್ನು ಪಿಎಸ್ ಯುಗಳಿಗೆ ವರ್ಗಾವಣೆ

ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ರಕ್ಷಣಾ ಸಚಿವಾಲಯವು ಆರ್ಡನೆನ್ಸ್ ಫ್ಯಾಕ್ಟರಿ ಬೋರ್ಡ್ (OFB) ವನ್ನು ರದ್ದುಪಡಿಸಿದ್ದು, ಅಲ್ಲಿದ್ದ ಆಸ್ತಿ, ಉದ್ಯೋಗಿಗಳು ಮತ್ತು ನಿರ್ವಹಣೆಯನ್ನು ಏಳು ಸಾರ್ವಜನಿಕ ವಲಯದ ಘಟಕಗಳಿಗೆ (PSU) ವರ್ಗಾಯಿಸಿದೆ.

ನವದೆಹಲಿ: ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ರಕ್ಷಣಾ ಸಚಿವಾಲಯವು ಆರ್ಡನೆನ್ಸ್ ಫ್ಯಾಕ್ಟರಿ ಬೋರ್ಡ್ (OFB) ವನ್ನು ರದ್ದುಪಡಿಸಿದ್ದು, ಅಲ್ಲಿದ್ದ ಆಸ್ತಿ, ಉದ್ಯೋಗಿಗಳು ಮತ್ತು ನಿರ್ವಹಣೆಯನ್ನು ಏಳು ಸಾರ್ವಜನಿಕ ವಲಯದ ಘಟಕಗಳಿಗೆ (PSU) ವರ್ಗಾಯಿಸಿದೆ.

"ಆತ್ಮನಿರ್ಭರ ಭಾರತ್" (ಸ್ವಾವಲಂಬಿ ಭಾರತ) ಯೋಜನೆಯ ಭಾಗವಾಗಿ, ಕೇಂದ್ರ ಸರ್ಕಾರ ಕಳೆದ ವರ್ಷ ಮೇ 16 ರಂದು ಒಎಫ್‌ಬಿಯ ಕಾರ್ಪೊರೇಟೈಸೇಶನ್ ಮೂಲಕ ಸ್ವಾಯತ್ತತೆ, ಹೊಣೆಗಾರಿಕೆ ಮತ್ತು ಯುದ್ಧ ಸಾಮಗ್ರಿಗಳ ದಕ್ಷತೆಯನ್ನು ಸುಧಾರಿಸುವುದಾಗಿ ಘೋಷಿಸಿತ್ತು.

ಸೆಪ್ಟೆಂಬರ್ 28 ರ ಆದೇಶದಲ್ಲಿ ರಕ್ಷಣಾ ಸಚಿವಾಲಯವು, "ಭಾರತ ಸರ್ಕಾರವು ಅಕ್ಟೋಬರ್ 1, 2021 ರಿಂದ ಅನ್ವಯವಾಗುವಂತೆ, ಈ 41 ಉತ್ಪಾದನಾ ಘಟಕಗಳ ನಿರ್ವಹಣೆ, ನಿಯಂತ್ರಣ, ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಮತ್ತು ಗುರುತಿಸಲಾಗಿರುವ ಉತ್ಪಾದನೆಯಲ್ಲದ ಘಟಕಗಳನ್ನು ಏಳು ಸರ್ಕಾರಿ ಕಂಪೆನಿಗಳಿಗೆ ವರ್ಗಾಯಿಸುತ್ತದೆ ಎಂದು ಹೇಳಿದೆ.

ಆದೇಶದ ಪ್ರಕಾರ, ಏಳು ರಕ್ಷಣಾ ಸಾರ್ವಜನಿಕ ವಲಯದ ಘಟಕಗಳಾದ ಮುನಿಷನ್ ಇಂಡಿಯಾ ಲಿಮಿಟೆಡ್, ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್, ಅಡ್ವಾನ್ಸ್ಡ್ ವೆಪನ್ಸ್ ಅಂಡ್ ಇಕ್ವಿಪ್ಮೆಂಟ್ ಇಂಡಿಯಾ ಲಿಮಿಟೆಡ್, ಟ್ರೂಪ್ ಕಂಫರ್ಟ್ಸ್ ಲಿಮಿಟೆಡ್, ಯಂತ್ರ ಇಂಡಿಯಾ ಲಿಮಿಟೆಡ್, ಇಂಡಿಯಾ ಆಪ್ಟೆಲ್ ಲಿಮಿಟೆಡ್ ಮತ್ತು ಗ್ಲೈಡರ್ಸ್ ಇಂಡಿಯಾ ಲಿಮಿಟೆಡ್ ಗಳಿಗೆ ವರ್ಗಾಯಿಸಲಾಗುತ್ತದೆ.

ಒಎಫ್ ಬಿ, ಪ್ರಸ್ತುತ ರಕ್ಷಣಾ ಸಚಿವಾಲಯದ ಘಟಕವಾಗಿದ್ದು, ಮೂರು ಸಶಸ್ತ್ರ ಪಡೆಗಳು ಮತ್ತು ಸೇನಾಪಡೆಗಳಿಗೆ ನಿರ್ಣಾಯಕ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪೂರೈಸುತ್ತದೆ.

ಉತ್ಪಾದನಾ ಘಟಕಗಳಿಗೆ ಸೇರಿದ ಒಫ್ ಎಫ್ ಬಿ(ಗುಂಪು ಎ,ಬಿ ಮತ್ತು ಸಿ) ನ ಎಲ್ಲಾ ಉದ್ಯೋಗಿಗಳನ್ನು ಮತ್ತು ಗುರುತಿಸಲಾಗಿರುವ ಉತ್ಪಾದನೇತರ ಘಟಕಗಳನ್ನು ಯಾವುದೇ ನಿಯೋಜನೆ ಭತ್ಯೆಯಿಲ್ಲದೆ ವಿದೇಶಿ ಸೇವೆಯ ನಿಯಮಗಳ ಮೇಲೆ ಹೊಸ ಸಾರ್ವಜನಿಕ ವಲಯ ಘಟಕಗಳಿಗೆ ಸಾಮೂಹಿಕವಾಗಿ ವರ್ಗಾಯಿಸಲು ಸರ್ಕಾರ ನಿರ್ಧರಿಸಿದೆ. ಅಕ್ಟೋಬರ್ 1ರಿಂದ ಎರಡು ವರ್ಷಗಳ ಅವಧಿಗೆ ಇದು ಅನ್ವಯವಾಗುತ್ತದೆ.

ಪ್ರತಿ ಹೊಸ ರಕ್ಷಣಾ ಸಾರ್ವಜನಿಕ ವಲಯ ಘಟಕಗಳ ಉದ್ಯೋಗಿಗಳ ಸೇವೆಯ ಸ್ಥಿತಿಗತಿಗಳಿಗೆ ಸಂಬಂಧಿಸಿದ ನಿಯಮಗಳು ಮತ್ತು ನಿಬಂಧನೆಗಳನ್ನು ರೂಪಿಸುವ ಅಗತ್ಯವಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT