ಭಾರತೀಯ ಸೇನೆ 
ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಸೇನಾ ಕಾರ್ಯಾಚರಣೆ: ಓರ್ವ ಉಗ್ರ ಹತ, ಮತ್ತೋರ್ವ ಶರಣಾಗತಿ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಡಗಿ ಕುಳಿತಿದ್ದ ಉಗ್ರರ ಮೇಲೆ ಸೇನೆ ದಾಳಿ ಮಾಡಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಡಗಿ ಕುಳಿತಿದ್ದ ಉಗ್ರರ ಮೇಲೆ ಸೇನೆ ದಾಳಿ ಮಾಡಿದೆ.

ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಇಂದು ಈ ದಾಳಿ ನಡೆದಿದ್ದು, ಕಾರ್ಯಾಚರಣೆಯಲ್ಲಿ ಓರ್ವ ಉಗ್ರಗಾಮಿಯನ್ನು ಸೇನೆ ಹೊಡೆದುರುಳಿಸಿದ್ದು, ಮತ್ತೋರ್ವ ಉಗ್ರ ಸೈನಿಕರ ಬಳಿ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಲಷ್ಕರ್ ಇ ತೊಯ್ಬಾ ಸಂಘಟನೆ ಕಮಾಂಡರ್  ರಿಯಾಜ್ ಸತ್ರ್ ಗುಂಡ್ ಎಂಬ ಉಗ್ರ ನಾಯಕ ತನಗೆ ಒಂದು ಅಡಗುದಾಣ ನಿರ್ಮಿಸಿಕೊಡುವಂತೆ ಕೇಳಿದ್ದು, ಆತನ ಆದೇಶದ ಮೇರೆದೆ ಸಂಘಟನೆ ಇಬ್ಬರು ಉಗ್ರರು ನೌಹಟ್ಟಾದ ರಜೌರಿ ಕದಲ್ ನಲ್ಲಿ ಅಡಗುತಾಣ ನಿರ್ಮಾಣಕ್ಕೆ ಮುಂದಾಗಿದ್ದರು. ಈ ವಿಚಾರ ತಿಳಿದು ಎಚ್ಚೆತ್ತ ಸೇನೆ ಉಗ್ರರ ಅಡಗುದಾಣದ ಬಗ್ಗೆ ಖಚಿತ ಮಾಹಿತಿ ಕಲೆಹಾಕಿ ಇಂದು ಮುಂಜಾನೆ ಪ್ರದೇಶವನ್ನು ಸುತ್ತುವರೆದಿತ್ತು. 

ಶ್ರೀನಗರ ಪೊಲೀಸರು ಮತ್ತು ಸೇನೆಯ 50RR ದಳದ ಸೈನಿಕರು ಉಗ್ರ ನಿಗ್ರಹ ಕಾರ್ಯಾಚರಣೆ ನಡೆಸಿದರು. ಪುಲ್ವಾಮದಿಂದಲೇ ಶೋಧ ನಡೆಸಿಕೊಂಡು ಬಂದಿದ್ದ ಸೈನಿಕಿರಿಗೆ ನೌಹಟ್ಟಾದಲ್ಲಿ ಉಗ್ರರ ಅಡಗುದಾಣ ದೊರೆತಿತ್ತು. ಈ ವೇಳೆ ಅಲ್ಲಿದ್ದ ಇಬ್ಬರು ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದರು. ಆದರೆ ಪ್ರತಿದಾಳಿ ನಡೆಸಿದ ಸೇನೆ ಇಬ್ಬರು ಉಗ್ರರ ಪೈಕಿ ಓರ್ವ ಉಗ್ರನನ್ನು ಹೊಡೆದುರುಳಿಸಿತು. ಈ ವೇಳೆ ಅಲ್ಲಿಯೇ ಇದ್ದ ಮತ್ತೋರ್ವ ಉಗ್ರ ಸೈನಿಕರ ಮಾತಿನಂತೆ ಶರಣಾಗಿದ್ದಾನೆ ಎಂದು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ