ಕಪಿಲ್ ಸಿಬಲ್ 
ದೇಶ

ಕಾಂಗ್ರೆಸ್ ಗೆ ಅಧ್ಯಕ್ಷರೇ ಇಲ್ಲ, ನಿರ್ಧಾರ ಕೈಗೊಳ್ಳುವವರು ಯಾರು?: ಕಪಿಲ್ ಸಿಬಲ್ ಪ್ರಶ್ನೆ

ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷ ಸ್ಥಾನದ ಚರ್ಚೆ ಮತ್ತೆ ಶುರುವಾಗಿದ್ದು, ಚುನಾಯಿತ ಅಧ್ಯಕ್ಷರಿಲ್ಲದ ಕಾರಣ ಪಕ್ಷದಲ್ಲಿ ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷ ಸ್ಥಾನದ ಚರ್ಚೆ ಮತ್ತೆ ಶುರುವಾಗಿದ್ದು, ಚುನಾಯಿತ ಅಧ್ಯಕ್ಷರಿಲ್ಲದ ಕಾರಣ ಪಕ್ಷದಲ್ಲಿ ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ. ಅಲ್ಲದೆ "ಜಿ -23" ನಾಯಕರು "ಜಿ ಹುಜೂರ್ ಗಳಲ್ಲ” ಎಂದಿದ್ದಾರೆ.

ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಸ್ಪಷ್ಟ ವಾಗ್ದಾಳಿ ನಡೆಸಿರುವ ಸಿಬಲ್, ಪಂಜಾಬ್‌ನಲ್ಲಿ ಪಕ್ಷದ ಬಿಕ್ಕಟ್ಟಿನ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು ಮತ್ತು ಇಂತಹ ಸಮಸ್ಯೆಗಳು ಪಕ್ಷದ ಸಭೆಯಲ್ಲಿ ಚರ್ಚಿತವಾಗಬೇಕೇ ಹೊರತು, ಸಾರ್ವಜನಿಕ ವೇದಿಕೆಯಲ್ಲಿ ಅಲ್ಲ ಎಂದಿದ್ದಾರೆ.

'ನಮ್ಮ ಪಕ್ಷದಲ್ಲಿ ಅಧ್ಯಕ್ಷರೇ ಇಲ್ಲ, ಹಾಗಾಗಿ ಈ ಎಲ್ಲ ನಿರ್ಧಾರಗಳನ್ನು ಯಾರು ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದಿಲ್ಲ. ನಮಗೆ ಅದು ತಿಳಿದಿರುವುದಾದರೂ, ತಿಳಿಯದಂತಾಗಿದೆ' ಎಂದು ವಾಸ್ತವ ಸ್ಥಿತಿಯನ್ನು ತೆರೆದಿಟ್ಟಿದ್ದಾರೆ.

ನಾವು(ಜಿ–23ರ ಮುಖಂಡರು) ಪಕ್ಷ ತೊರೆದು, ಬೇರೆ ಎಲ್ಲಿಗೋ ಹೋಗುವವರಲ್ಲ. ಯಾರು ಪಕ್ಷದ ನಾಯಕತ್ವಕ್ಕೆ ಹತ್ತಿರದಲ್ಲಿದ್ದರೋ ಅವರು ಪಕ್ಷ ತೊರೆದರು, ವಿಪರ್ಯಾಸವೆಂದರೆ ಯಾರನ್ನು ಅವರು(ಪಕ್ಷದ ನಾಯಕತ್ವ) ಹತ್ತಿರದವರು ಎಂದು ಭಾವಿಸಲಿಲ್ಲವೋ ಅವರಿನ್ನೂ ಜೊತೆಗೆ ನಿಂತಿದ್ದಾರೆ ಎಂದು ಪಕ್ಷದೊಳಗಿನ ಸ್ಥಿತಿಯನ್ನು ಕಪಿಲ್‌ ಸಿಬಲ್‌ ಹೊರಹಾಕಿದ್ದಾರೆ.

ಇತ್ತೀಚೆಗೆ ಪಕ್ಷವನ್ನು ತೊರೆದು ಹೋದವರು ಎಲ್ಲರೂ ಮರಳಿ ಪಕ್ಷಕ್ಕೆ ಬರಬೇಕು. ಕಾಂಗ್ರೆಸ್ ಮಾತ್ರವೇ ದೇಶವನ್ನು ಉಳಿಸಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT