ಕಪಿಲ್ ಸಿಬಲ್ 
ದೇಶ

ಕಾಂಗ್ರೆಸ್ ಗೆ ಅಧ್ಯಕ್ಷರೇ ಇಲ್ಲ, ನಿರ್ಧಾರ ಕೈಗೊಳ್ಳುವವರು ಯಾರು?: ಕಪಿಲ್ ಸಿಬಲ್ ಪ್ರಶ್ನೆ

ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷ ಸ್ಥಾನದ ಚರ್ಚೆ ಮತ್ತೆ ಶುರುವಾಗಿದ್ದು, ಚುನಾಯಿತ ಅಧ್ಯಕ್ಷರಿಲ್ಲದ ಕಾರಣ ಪಕ್ಷದಲ್ಲಿ ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷ ಸ್ಥಾನದ ಚರ್ಚೆ ಮತ್ತೆ ಶುರುವಾಗಿದ್ದು, ಚುನಾಯಿತ ಅಧ್ಯಕ್ಷರಿಲ್ಲದ ಕಾರಣ ಪಕ್ಷದಲ್ಲಿ ಯಾರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ. ಅಲ್ಲದೆ "ಜಿ -23" ನಾಯಕರು "ಜಿ ಹುಜೂರ್ ಗಳಲ್ಲ” ಎಂದಿದ್ದಾರೆ.

ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಸ್ಪಷ್ಟ ವಾಗ್ದಾಳಿ ನಡೆಸಿರುವ ಸಿಬಲ್, ಪಂಜಾಬ್‌ನಲ್ಲಿ ಪಕ್ಷದ ಬಿಕ್ಕಟ್ಟಿನ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು ಮತ್ತು ಇಂತಹ ಸಮಸ್ಯೆಗಳು ಪಕ್ಷದ ಸಭೆಯಲ್ಲಿ ಚರ್ಚಿತವಾಗಬೇಕೇ ಹೊರತು, ಸಾರ್ವಜನಿಕ ವೇದಿಕೆಯಲ್ಲಿ ಅಲ್ಲ ಎಂದಿದ್ದಾರೆ.

'ನಮ್ಮ ಪಕ್ಷದಲ್ಲಿ ಅಧ್ಯಕ್ಷರೇ ಇಲ್ಲ, ಹಾಗಾಗಿ ಈ ಎಲ್ಲ ನಿರ್ಧಾರಗಳನ್ನು ಯಾರು ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದಿಲ್ಲ. ನಮಗೆ ಅದು ತಿಳಿದಿರುವುದಾದರೂ, ತಿಳಿಯದಂತಾಗಿದೆ' ಎಂದು ವಾಸ್ತವ ಸ್ಥಿತಿಯನ್ನು ತೆರೆದಿಟ್ಟಿದ್ದಾರೆ.

ನಾವು(ಜಿ–23ರ ಮುಖಂಡರು) ಪಕ್ಷ ತೊರೆದು, ಬೇರೆ ಎಲ್ಲಿಗೋ ಹೋಗುವವರಲ್ಲ. ಯಾರು ಪಕ್ಷದ ನಾಯಕತ್ವಕ್ಕೆ ಹತ್ತಿರದಲ್ಲಿದ್ದರೋ ಅವರು ಪಕ್ಷ ತೊರೆದರು, ವಿಪರ್ಯಾಸವೆಂದರೆ ಯಾರನ್ನು ಅವರು(ಪಕ್ಷದ ನಾಯಕತ್ವ) ಹತ್ತಿರದವರು ಎಂದು ಭಾವಿಸಲಿಲ್ಲವೋ ಅವರಿನ್ನೂ ಜೊತೆಗೆ ನಿಂತಿದ್ದಾರೆ ಎಂದು ಪಕ್ಷದೊಳಗಿನ ಸ್ಥಿತಿಯನ್ನು ಕಪಿಲ್‌ ಸಿಬಲ್‌ ಹೊರಹಾಕಿದ್ದಾರೆ.

ಇತ್ತೀಚೆಗೆ ಪಕ್ಷವನ್ನು ತೊರೆದು ಹೋದವರು ಎಲ್ಲರೂ ಮರಳಿ ಪಕ್ಷಕ್ಕೆ ಬರಬೇಕು. ಕಾಂಗ್ರೆಸ್ ಮಾತ್ರವೇ ದೇಶವನ್ನು ಉಳಿಸಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ: ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!

Varanasi: ತೆಲುಗು ರಾಜ್ಯಗಳಲ್ಲಿ ಬರೋಬ್ಬರಿ 320 ಕೋಟಿಗೆ ಥಿಯೇಟ್ರಿಕಲ್ ಹಕ್ಕುಗಳ ಮಾರಾಟ? ರಾಜಮೌಳಿಗೆ ತಲೆಬಿಸಿ!