ನವ್ ಜೋತ್ ಸಿಂಗ್ ಸಿಧು 
ದೇಶ

ಹೊರಗಿನವರಾದ ಸಿಧುವಿಗೆ ಉನ್ನತ ಸ್ಥಾನ ಕೊಟ್ಟಿದ್ದು ದೊಡ್ಡ ತಪ್ಪು: ಕಾಂಗ್ರೆಸ್ ನಾಯಕರ ಪಶ್ಚಾತ್ತಾಪ

ಮೊದಲು ಸಿಧು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಬೇಕಿತ್ತು, ಪಕ್ಷದ ಸಿದ್ಧಾಂತ ಕಾರ್ಯವೈಖರಿಯನ್ನು ಅರ್ಥ ಮಾಡಿಕೊಳ್ಳಬೇಕಿತ್ತು ನಂತರ ಅವರಿಗೆ ಉನ್ನತ ಸ್ಥಾನ ನೀಡಿದರೆ ಅದರಲ್ಲಿ ಅರ್ಥವಿರುತ್ತಿತ್ತು.

ನವದೆಹಲಿ: ಪಂಜಾಬ್ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವ್ ಜೋತ್ ಸಿಂಗ್ ಸಿಧು ರಾಜಿನಾಮೆ ನೀಡಿದ ಬೆನ್ನಲ್ಲೇ ಸಿಧುವನ್ನು ಪಕ್ಷದ ಉನ್ನತ ಸ್ಥಾನಕ್ಕೆ ನೇಮಿಸಿದ್ದು ಎಂದು ಪಕ್ಷದ ಹಿರಿಯ ಮುಖಂಡರು ಹೇಳಿದ್ದಾರೆ. 

ಮೊದಲು ಸಿಧು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಬೇಕಿತ್ತು, ಪಕ್ಷದ ಸಿದ್ಧಾಂತ ಕಾರ್ಯವೈಖರಿಯನ್ನು ಅರ್ಥ ಮಾಡಿಕೊಳ್ಳಬೇಕಿತ್ತು ನಂತರ ಅವರಿಗೆ ಉನ್ನತ ಸ್ಥಾನ ನೀಡಿದರೆ ಅದರಲ್ಲಿ ಅರ್ಥವಿರುತ್ತಿತ್ತು. ಆದರೆ ಏಕಾಏಕಿ ಅವರನ್ನು ಉನ್ನತ ಸ್ಥಾನಕ್ಕೆ ತಂದು ಕೂರಿಸಿದ್ದು ತಪ್ಪು ಎಂಡು ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಸಿಧು ಬಿಜೆಪಿಯಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟು ಸೋತಿದ್ದರು. ಆತ ಆಪ್ ಪಕ್ಷದ ಜೊತೆಗೂ ಮಾತುಕತೆ ನಡೆಸಿದ್ದರು. ಅಂಥಾ ಸಮಯದಲ್ಲಿ ಅಮರಿಂದರ್ ಸಿಂಗ್ ಅವರನ್ನು ಬದಿಗೊತ್ತಿ ಸಿಧು ಅವರನ್ನು ಕಾಂಗ್ರೆಸ್ ಉನ್ನತ ಸ್ಥಾನಕ್ಕೆ ನೇಮಿಸಿದ್ದು ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನಿಸಿದಂತಾಗುತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ. 

ಲಾಲ್ ಬಹದೂರ್ ಶಾಸ್ತ್ರಿ ಮೊಮ್ಮಗ, ಪ್ರಿಯಾಂಕಾ ಗಾಂಧಿ ಅವರ ರಾಜಕೀಯ ಸಲಹೆಗಾರ ವಿಭಾಕರ್ ಶಾಸ್ತ್ರಿ ಕೂಡಾ ಈ ಮಾತಿಗೆ ಸಹಮತ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

SCROLL FOR NEXT