ಸಾಂದರ್ಭಿಕ ಚಿತ್ರ 
ದೇಶ

ಆನೆಗಳನ್ನು ಆತಂಕವಾದಿಯಂತೆ ಬಿಂಬಿಸಬೇಡಿ: ಹಿಂದಿ ಮಾಧ್ಯಮಗಳಿಗೆ ಪರಿಸರ ಮತ್ತು ಅರಣ್ಯ ಇಲಾಖೆ ಸೂಚನೆ

ಆನೆಗಳ ಬಗ್ಗೆ ಕೆಟ್ಟ ಭಾವನೆ ಮೂಡುವಂತೆ ಬರೆಯುವುದರಿಂದ ಸಾರ್ವಜನಿಕರಲ್ಲಿ ಆನೆಗಳ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತಿದೆ ಎಂದು ವನ್ಯಜೀವಿ ತಜ್ಞರು ಈ ಹಿಂದೆ ಆತಂಕ ವ್ಯಕ್ತಪಡಿಸಿದ್ದರು.

ಬೆಂಗಳೂರು: ಹಿಂದಿ ಪತ್ರಿಕೆ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಆನೆಗಳ ಮೇಲೆ ಕೆಟ್ಟ ಭಾಷೆಯನ್ನು ಪ್ರಯೋಗಿಸುತ್ತಿರುವುದನ್ನು ಗಮನಿಸಿರುವ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಈ ಬಗ್ಗೆ ಮಾಧ್ಯಮಗಳಿಗೆ ಸೂಚನೆ ನೀಡಿದೆ. 

ಆನೆಗಳ ಕುರಿತಾದ ಬಹುತೇಕ ಸುದ್ದಿಗಳಲ್ಲಿ ಆನೆಗಳನ್ನು ಉಲ್ಲೇಖಿಸುವಾಗ ಪ್ರಚೋದನಕಾರಿಯಾದ ಪದಗಳ ಬಳಕೆ ಮಾಡಿರುವುದನ್ನು ಇಲಾಖೆ ಪ್ರಶ್ನಿಸಿದೆ. ಈ ರೀತಿ ಆನೆಗಳ ಬಗ್ಗೆ ಕೆಟ್ಟ ಭಾವನೆ ಮೂಡುವಂತೆ ಬರೆಯುವುದರಿಂದ ಸಾರ್ವಜನಿಕರಲ್ಲಿ ಆನೆಗಳ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತಿದೆ ಎಂದು ವನ್ಯಜೀವಿ ತಜ್ಞರು ಈ ಹಿಂದೆ ಆತಂಕ ವ್ಯಕ್ತಪಡಿಸಿದ್ದರು. 

ಹಿಂದಿ ಮಾಧ್ಯಮಗಳಲ್ಲಿ ಆನೆಗಳನ್ನು ಆತಂಕವಾದಿ, ಉತ್ಪಾತಿ, ಹಿಂಸಾವಾದಿ, ಕೊಲೆಗಾರ ಎಂಬಿತ್ಯಾದಿ ಪದಗಳಿಂದ ವರ್ಣಿಸಿದ್ದವು. ಈ ಕುರಿತಾದ ಪತ್ರಿಕೆ ಸುದ್ದಿಗಳು ಮತ್ತು ಎಲೆಕ್ಟ್ರಾನಿಕ್ ಮೀಡಿಯಾ ವರದಿ ಪ್ರತಿಗಳನ್ನು ವನ್ಯಜೀವಿ ತಜ್ಞ ನಿತಿನ್ ಸಿಂಘ್ವಿ ಎಂಬುವವರು ಪರಿಸರ ಮತ್ತು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT