ಸಾಂದರ್ಭಿಕ ಚಿತ್ರ 
ದೇಶ

ಆನೆಗಳನ್ನು ಆತಂಕವಾದಿಯಂತೆ ಬಿಂಬಿಸಬೇಡಿ: ಹಿಂದಿ ಮಾಧ್ಯಮಗಳಿಗೆ ಪರಿಸರ ಮತ್ತು ಅರಣ್ಯ ಇಲಾಖೆ ಸೂಚನೆ

ಆನೆಗಳ ಬಗ್ಗೆ ಕೆಟ್ಟ ಭಾವನೆ ಮೂಡುವಂತೆ ಬರೆಯುವುದರಿಂದ ಸಾರ್ವಜನಿಕರಲ್ಲಿ ಆನೆಗಳ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತಿದೆ ಎಂದು ವನ್ಯಜೀವಿ ತಜ್ಞರು ಈ ಹಿಂದೆ ಆತಂಕ ವ್ಯಕ್ತಪಡಿಸಿದ್ದರು.

ಬೆಂಗಳೂರು: ಹಿಂದಿ ಪತ್ರಿಕೆ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಆನೆಗಳ ಮೇಲೆ ಕೆಟ್ಟ ಭಾಷೆಯನ್ನು ಪ್ರಯೋಗಿಸುತ್ತಿರುವುದನ್ನು ಗಮನಿಸಿರುವ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಈ ಬಗ್ಗೆ ಮಾಧ್ಯಮಗಳಿಗೆ ಸೂಚನೆ ನೀಡಿದೆ. 

ಆನೆಗಳ ಕುರಿತಾದ ಬಹುತೇಕ ಸುದ್ದಿಗಳಲ್ಲಿ ಆನೆಗಳನ್ನು ಉಲ್ಲೇಖಿಸುವಾಗ ಪ್ರಚೋದನಕಾರಿಯಾದ ಪದಗಳ ಬಳಕೆ ಮಾಡಿರುವುದನ್ನು ಇಲಾಖೆ ಪ್ರಶ್ನಿಸಿದೆ. ಈ ರೀತಿ ಆನೆಗಳ ಬಗ್ಗೆ ಕೆಟ್ಟ ಭಾವನೆ ಮೂಡುವಂತೆ ಬರೆಯುವುದರಿಂದ ಸಾರ್ವಜನಿಕರಲ್ಲಿ ಆನೆಗಳ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತಿದೆ ಎಂದು ವನ್ಯಜೀವಿ ತಜ್ಞರು ಈ ಹಿಂದೆ ಆತಂಕ ವ್ಯಕ್ತಪಡಿಸಿದ್ದರು. 

ಹಿಂದಿ ಮಾಧ್ಯಮಗಳಲ್ಲಿ ಆನೆಗಳನ್ನು ಆತಂಕವಾದಿ, ಉತ್ಪಾತಿ, ಹಿಂಸಾವಾದಿ, ಕೊಲೆಗಾರ ಎಂಬಿತ್ಯಾದಿ ಪದಗಳಿಂದ ವರ್ಣಿಸಿದ್ದವು. ಈ ಕುರಿತಾದ ಪತ್ರಿಕೆ ಸುದ್ದಿಗಳು ಮತ್ತು ಎಲೆಕ್ಟ್ರಾನಿಕ್ ಮೀಡಿಯಾ ವರದಿ ಪ್ರತಿಗಳನ್ನು ವನ್ಯಜೀವಿ ತಜ್ಞ ನಿತಿನ್ ಸಿಂಘ್ವಿ ಎಂಬುವವರು ಪರಿಸರ ಮತ್ತು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT