ದಿಗ್ವಿಜಯ್ ಸಿಂಗ್ 
ದೇಶ

ಆರ್ ಎಸ್ಎಸ್ ಶಾಲೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ: ದಿಗ್ವಿಜಯ್ ಸಿಂಗ್ ಗೆ ಲೀಗಲ್ ನೊಟೀಸ್ 

ಆರ್ ಎಸ್ ಎಸ್ ನ ಶಾಲೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ, ರಾಜ್ಯಸಭೆ ಸಂಸದ ದಿಗ್ವಿಜಯ್ ಸಿಂಗ್ ಅವರಿಗೆ ಮಧ್ಯಪ್ರದೇಶದ ಬಿಜೆಪಿ ವಕ್ತಾರ ಪಂಕಜ್ ಚತುರ್ವೇದಿ ಕಾನೂನು ನೊಟೀಸ್ ಜಾರಿಗೊಳಿಸಿದ್ದಾರೆ. 

ಭೋಪಾಲ್: ಆರ್ ಎಸ್ ಎಸ್ ನ ಶಾಲೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ, ರಾಜ್ಯಸಭೆ ಸಂಸದ ದಿಗ್ವಿಜಯ್ ಸಿಂಗ್ ಅವರಿಗೆ ಮಧ್ಯಪ್ರದೇಶದ ಬಿಜೆಪಿ ವಕ್ತಾರ ಪಂಕಜ್ ಚತುರ್ವೇದಿ ಕಾನೂನು ನೊಟೀಸ್ ಜಾರಿಗೊಳಿಸಿದ್ದಾರೆ. 

ಮಧ್ಯಪ್ರದೇಶದ ಮಾಜಿ ಸಿಎಂ ಸಿಂಗ್, ಆರ್ ಎಸ್ಎಸ್ ನಡೆಸುತ್ತಿರುವ ಸರಸ್ವತಿ ಶಿಶು ಮಂದಿರ ಶಾಲೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು ಈ ಹೇಳಿಕೆಗೆ ಖಂಡನೆ ವ್ಯಾಪಕವಾಗಿ ವ್ಯಕ್ತವಾಗಿತ್ತು.

ಲೀಗಲ್ ನೊಟೀಸ್ ಕಳಿಸಿರುವ ಪಂಕಜ್ ಚತುರ್ವೇದಿ, "ತಾವು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಿ, ಇಲ್ಲವೇ ಕಾನೂನು ಕ್ರಮ ಎದುರಿಸಿ ಎಂದು ಎಚ್ಚರಿಸಲಾಗಿದೆ.

"ದೇಶದ ಉದ್ದಗಲಕ್ಕೂ ಹರಡಿಕೊಂಡಿರುವ ಸರಸ್ವತಿ ಶಿಶು ಮಂದಿರಗಳ ಬಗ್ಗೆ ದಿಗ್ವಿಜಯ್ ಸಿಂಗ್ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆ ಕೇಳಲಿ" ಎಂದು ಪಂಕಜ್ ಚತುರ್ವೇದಿ ಆಗ್ರಹಿಸಿದ್ದು ತಮ್ಮ ವಕೀಲರಾದ ಪ್ರಮೋದ್ ಸಕ್ಸೇನಾ ಮೂಲಕ ನೊಟೀಸ್ ಕಳಿಸಿದ್ದಾರೆ.

ಆರ್ ಎಸ್ಎಸ್ ನಡೆಸುತ್ತಿರುವ ಸರಸ್ವತಿ ಶಿಶು ಮಂದಿರ-ಶಾಲೆಗಳ ಜಾಲಗಳು ದೇಶದಲ್ಲಿ ಕೋಮು ಕಹಿ ಹರಡುವುದಕ್ಕೆ ಕಾರಣವಾಗಿದೆ. ಈ ಸಂಸ್ಥೆಗಳು ಯುವ ಮನಸ್ಸುಗಳಲ್ಲಿ ದ್ವೇಷದ ಬೀಜವನ್ನು ಬಿತ್ತುತ್ತಿವೆ" ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದರು.

ಇನ್ನು ಬುಧವಾರದಂದು ಮಾತನಾಡಿರುವ ದಿಗ್ವಿಜಯ್ ಸಿಂಗ್ ರಾಜಕಾರಣಿಗಳು ರಾಜಕೀಯ ಪ್ರಪಂಚದಲ್ಲಿ ಬದುಕಿ ಉಳಿಯಬೇಕಾದರೆ ದಪ್ಪ ಚರ್ಮ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT