ದಿಗ್ವಿಜಯ್ ಸಿಂಗ್ 
ದೇಶ

ಆರ್ ಎಸ್ಎಸ್ ಶಾಲೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ: ದಿಗ್ವಿಜಯ್ ಸಿಂಗ್ ಗೆ ಲೀಗಲ್ ನೊಟೀಸ್ 

ಆರ್ ಎಸ್ ಎಸ್ ನ ಶಾಲೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ, ರಾಜ್ಯಸಭೆ ಸಂಸದ ದಿಗ್ವಿಜಯ್ ಸಿಂಗ್ ಅವರಿಗೆ ಮಧ್ಯಪ್ರದೇಶದ ಬಿಜೆಪಿ ವಕ್ತಾರ ಪಂಕಜ್ ಚತುರ್ವೇದಿ ಕಾನೂನು ನೊಟೀಸ್ ಜಾರಿಗೊಳಿಸಿದ್ದಾರೆ. 

ಭೋಪಾಲ್: ಆರ್ ಎಸ್ ಎಸ್ ನ ಶಾಲೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ, ರಾಜ್ಯಸಭೆ ಸಂಸದ ದಿಗ್ವಿಜಯ್ ಸಿಂಗ್ ಅವರಿಗೆ ಮಧ್ಯಪ್ರದೇಶದ ಬಿಜೆಪಿ ವಕ್ತಾರ ಪಂಕಜ್ ಚತುರ್ವೇದಿ ಕಾನೂನು ನೊಟೀಸ್ ಜಾರಿಗೊಳಿಸಿದ್ದಾರೆ. 

ಮಧ್ಯಪ್ರದೇಶದ ಮಾಜಿ ಸಿಎಂ ಸಿಂಗ್, ಆರ್ ಎಸ್ಎಸ್ ನಡೆಸುತ್ತಿರುವ ಸರಸ್ವತಿ ಶಿಶು ಮಂದಿರ ಶಾಲೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು ಈ ಹೇಳಿಕೆಗೆ ಖಂಡನೆ ವ್ಯಾಪಕವಾಗಿ ವ್ಯಕ್ತವಾಗಿತ್ತು.

ಲೀಗಲ್ ನೊಟೀಸ್ ಕಳಿಸಿರುವ ಪಂಕಜ್ ಚತುರ್ವೇದಿ, "ತಾವು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಿ, ಇಲ್ಲವೇ ಕಾನೂನು ಕ್ರಮ ಎದುರಿಸಿ ಎಂದು ಎಚ್ಚರಿಸಲಾಗಿದೆ.

"ದೇಶದ ಉದ್ದಗಲಕ್ಕೂ ಹರಡಿಕೊಂಡಿರುವ ಸರಸ್ವತಿ ಶಿಶು ಮಂದಿರಗಳ ಬಗ್ಗೆ ದಿಗ್ವಿಜಯ್ ಸಿಂಗ್ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆ ಕೇಳಲಿ" ಎಂದು ಪಂಕಜ್ ಚತುರ್ವೇದಿ ಆಗ್ರಹಿಸಿದ್ದು ತಮ್ಮ ವಕೀಲರಾದ ಪ್ರಮೋದ್ ಸಕ್ಸೇನಾ ಮೂಲಕ ನೊಟೀಸ್ ಕಳಿಸಿದ್ದಾರೆ.

ಆರ್ ಎಸ್ಎಸ್ ನಡೆಸುತ್ತಿರುವ ಸರಸ್ವತಿ ಶಿಶು ಮಂದಿರ-ಶಾಲೆಗಳ ಜಾಲಗಳು ದೇಶದಲ್ಲಿ ಕೋಮು ಕಹಿ ಹರಡುವುದಕ್ಕೆ ಕಾರಣವಾಗಿದೆ. ಈ ಸಂಸ್ಥೆಗಳು ಯುವ ಮನಸ್ಸುಗಳಲ್ಲಿ ದ್ವೇಷದ ಬೀಜವನ್ನು ಬಿತ್ತುತ್ತಿವೆ" ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದರು.

ಇನ್ನು ಬುಧವಾರದಂದು ಮಾತನಾಡಿರುವ ದಿಗ್ವಿಜಯ್ ಸಿಂಗ್ ರಾಜಕಾರಣಿಗಳು ರಾಜಕೀಯ ಪ್ರಪಂಚದಲ್ಲಿ ಬದುಕಿ ಉಳಿಯಬೇಕಾದರೆ ದಪ್ಪ ಚರ್ಮ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!