ಸಾಂದರ್ಭಿಕ ಚಿತ್ರ 
ದೇಶ

ಗೋರಖ್ ಪುರ ಹೋಟೆಲ್ ದಾಳಿಯಲ್ಲಿ ಉದ್ಯಮಿ ಸಾವು ಪ್ರಕರಣ: ಆರು ಪೊಲೀಸ್ ಸಿಬ್ಬಂದಿ ಅಮಾನತು

ಗೋರಖ್ ಪುರ್ ದಾಳಿ ಪ್ರಕರಣದಲ್ಲಿ ಕಾನ್ಪುರ ಮೂಲದ ಉದ್ಯಮಿ ಸಾವನ್ನಪ್ಪಿದ ಕೇಸ್ ಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಆರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ.

ಲಕ್ನೋ: ಗೋರಖ್ ಪುರ್ ದಾಳಿ ಪ್ರಕರಣದಲ್ಲಿ ಕಾನ್ಪುರ ಮೂಲದ ಉದ್ಯಮಿ ಸಾವನ್ನಪ್ಪಿದ ಕೇಸ್ ಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಆರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ ಎಂದು ಉತ್ತರ ಪ್ರದೇಶ ಕಾನೂನು ಸಚಿವ ಬ್ರಜೇಶ್ ಪಾಠಕ್ ಹೇಳಿದ್ದಾರೆ.

ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಪ್ರಕರಣ ನಡೆದಿದ್ದು, ದುರಾದೃಷ್ಟ ಎಂದು ಹೇಳಿದ್ದಾರೆ. ಅಮಾನತುಗೊಂಡಿರುವ ಆರು ಮಂದಿ ಸಿಬ್ಬಂದಿ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಹಾಗೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸಿಎಂ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಈ ವಿಷಯವನ್ನು ತ್ವರಿತ ನ್ಯಾಯಾಲಯಕ್ಕೆ ಕೊಂಡೊಯ್ಯಲಾಗುವುದು ಎಂದು ಭರವಸೆ ನೀಡಿದ ಅವರು , ಆತ  ಪೋಲೀಸ್ ಆಗಿರಲಿ ಅಥವಾ ಉನ್ನತ ಹುದ್ದೆಯಲ್ಲಿರಲಿ, ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದು  ಪಾಠಕ್ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ, ಉದ್ಯಮಿ ಮನೀಶ್ ಗುಪ್ತಾ ಅವರ ಮುಖ, ತಲೆ ಮತ್ತು ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿತ್ತು. ಸೆಪ್ಟೆಂಬರ್ 28 ರಂದು ಗೋರಖ್‌ಪುರದ ಹೋಟೆಲ್‌ನಲ್ಲಿ ನಡೆಸಿದ ದಾಳಿಯಲ್ಲಿ ಗುಪ್ತಾ ಸಾವನ್ನಪ್ಪಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT