ಮಂಕಿಪಾಕ್ಸ್ (ಸಂಗ್ರಹ ಚಿತ್ರ) 
ದೇಶ

ಮಂಕಿಪಾಕ್ಸ್ ಪ್ರಕರಣಗಳ ಮೇಲೆ ನಿಗಾ ವಹಿಸಲು ಕಾರ್ಯಪಡೆ ರಚಿಸಿದ ಕೇಂದ್ರ ಸರ್ಕಾರ 

 ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಮೇಲೆ ನಿಗಾ ವಹಿಸುವುದಕ್ಕಾಗಿ ಕಾರ್ಯಪಡೆಯನ್ನು ರಚಿಸಿದೆ. 

ನವದೆಹಲಿ: ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಮೇಲೆ ನಿಗಾ ವಹಿಸುವುದಕ್ಕಾಗಿ ಕಾರ್ಯಪಡೆಯನ್ನು ರಚಿಸಿದೆ. 

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಈ ಸೋಂಕಿಗೆ ಲಸಿಕೆ ಕಂಡುಕೊಳ್ಳಲು ಡಯಾಗ್ನೋಸ್ಟಿಕ್ ಸೌಲಭ್ಯಗಳ ವಿಸ್ತರಣೆಗೆ ಸರ್ಕಾರಗಳಿಗೆ ಮಾರ್ಗದರ್ಶನವನ್ನು ಈ ಕಾರ್ಯಪಡೆ ನೀಡಲಿದೆ.

ಇದನ್ನೂ ಓದಿ: ಕೇರಳ: ಮಂಕಿಪಾಕ್ಸ್ ಕಾಯಿಲೆ ಲಕ್ಷಣಗಳನ್ನು ಹೊಂದಿದ್ದ ವ್ಯಕ್ತಿ ಸಾವು

ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ.ವಿ.ಕೆ ಪೌಲ್ ನೇತೃತ್ವದ ತಂಡ ಇದಾಗಿದ್ದು, ಇದರಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ, ಫಾರ್ಮಾ ಹಾಗೂ ಬಯೋಟೆಕ್ ನ  ಕಾರ್ಯದರ್ಶಿಗಳು ಇರಲಿದ್ದಾರೆ.

ಭಾರತದಲ್ಲಿ ಈ ವರೆಗೂ ನಾಲ್ಕು ಮಂಕಿಪಾಕ್ಸ್ ಸೋಂಕು ಪತ್ತೆಯಾಗಿದ್ದು, ಮೂರು ಕೇರಳದಲ್ಲಿ ಪತ್ತೆಯಾಗಿದ್ದರೆ, ದೆಹಲಿಯಲ್ಲಿ ಒಂದು ಪ್ರಕರಣ ದೃಢಪಟ್ಟಿದೆ.
 
ಜಾಗತಿಕ ಮಟ್ಟದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿರುವಂತೆ ಕೇಂದ್ರ ಸರ್ಕಾರ ಅಲರ್ಟ್ ಮೋಡ್ ನಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆ ಮಂಕಿಪಾಕ್ಸ್ ಸೋಂಕನ್ನು ಸಾರ್ವಜನಿಕ ಆರೋಗ್ಯ ತುರ್ತು ಎಂದು ಘೋಷಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT