ವಿಶೇಷ ಚೇತನ ಸ್ನೇಹಿ ಬಸ್ ವ್ಯವಸ್ಥೆ (ಸಂಗ್ರಹ ಚಿತ್ರ) 
ದೇಶ

12 ರಾಜ್ಯಗಳಲ್ಲಿನ ಸಾರಿಗೆ ಏಜೆನ್ಸಿಗಳಲ್ಲಿ ವಿಶೇಷ ಚೇತನ ಸ್ನೇಹಿ ಬಸ್ ವ್ಯವಸ್ಥೆ ಇಲ್ಲ! 

12 ರಾಜ್ಯಗಳಲ್ಲಿನ ಸಾರಿಗೆ ಏಜೆನ್ಸಿಗಳಲ್ಲಿ ವಿಶೇಷ ಚೇತನರಿಗಾಗಿ ಒಂದೇ ಒಂದು ಬಸ್ ವ್ಯವಸ್ಥೆಯೂ ಇಲ್ಲ ಎಂಬ ಮಾಹಿತಿಯನ್ನು ಸ್ವತಃ ಕೇಂದ್ರ ಸರ್ಕಾರ ಬಹಿರಂಗಪಡಿಸಿದೆ.

ನವದೆಹಲಿ: 12 ರಾಜ್ಯಗಳಲ್ಲಿನ ಸಾರಿಗೆ ಏಜೆನ್ಸಿಗಳಲ್ಲಿ ವಿಶೇಷ ಚೇತನರಿಗಾಗಿ ಒಂದೇ ಒಂದು ಬಸ್ ವ್ಯವಸ್ಥೆಯೂ ಇಲ್ಲ ಎಂಬ ಮಾಹಿತಿಯನ್ನು ಸ್ವತಃ ಕೇಂದ್ರ ಸರ್ಕಾರ ಬಹಿರಂಗಪಡಿಸಿದೆ.
 
ಇದಷ್ಟೇ ಅಲ್ಲದೇ ರಾಜ್ಯದಿಂದ ನಿರ್ವಹಿಸಲ್ಪಡುವ ಶೇ.65 ರಷ್ಟು ಸಾರ್ವಜನಿಕ ಸಾರಿಗೆಯ ಬಸ್ ಗಳಲ್ಲಿ ವಿಶೇಷ ಚೇತನರ ಅಗತ್ಯತೆಗಳನ್ನು ಪೂರೈಸುತ್ತಿಲ್ಲ ಎಂಬ ಅಂಶವೂ ಬೆಳಕಿಗೆ ಬಂದಿದೆ.
 
ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ಪ್ರಕಾರ 61 ಎಸ್ ಟಿ ಯು ಗಳು 1,45,747 ಬಸ್ ಗಳನ್ನು ನಿರ್ವಹಿಸುತ್ತಿದ್ದು ಈ ಪೈಕಿ ಕೇವಲ 51,043 ಬಸ್ ಗಳಲ್ಲಿ ಮಾತ್ರವೇ ವಿಶೇಷ ಚೇತನರಿಗೆ ಅನುಕೂಲವಾಗುವಂತೆ ಬಸ್ ಏರುವ ಹಾಗೂ ಇಳಿಯುವ ವ್ಯವಸ್ಥೆ ಇದೆ. 

ರಾಜಸ್ಥಾನ ರಸ್ತೆ ಸಾರಿಗೆ ನಿಗಮ, ಒಡಿಶಾ ರಸ್ತೆ ಸಾರಿಗೆ ನಿಗಮ, ಹರ್ಯಾಣ, ಅರುಣಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಮೇಘಾಲಯ, ಮಿಜೋರಾಮ್, ಪಂಜಾಬ್, ಸಿಕ್ಕೀಮ್, ಉತ್ತರಾಖಂಡ್ ಹಾಗೂ ದಕ್ಷಿಣ ಬಂಗಾಳ ಸಾರಿಗೆ ನಿಮಗಳ ಬಸ್ ಗಳು ವಿಶೇಷಚೇತನರಿಗೆ ಅನುಕೂಲವಾಗುವಂತಹ ವ್ಯವಸ್ಥೆಗಳನ್ನು ಹೊಂದಿಲ್ಲ. 

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಬಿಎಂಟಿಸಿ, ದೆಹಲಿ ಸಾರಿಗೆ ನಿಗಮ, ಜೈಪುರ ಸಿಟಿ ಟಿಎಸ್ಎಲ್, ತಮಿಳುನಾಡು ಕುಂಭಕೋಣಂ, ನವಿ ಮುಂಬೈ ಮುನ್ಸಿಪಲ್ ಟ್ರಾನ್ಸ್ಪೋರ್ಟ್ (ಎನ್ಎಂಎಂಟಿ) ಲಖನೌ ಸಿಟಿ ಸರ್ವಿಸಸ್ ಲಿಮಿಟೆಡ್, ಮೀರತ್ ಸಿಟಿ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್, ಅಲಹಾಬಾದ್ ಸಿಟಿ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್, ವಾರಣಾಸಿ ಸಿಟಿ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್, ಆಗ್ರಾ-ಮಥುರಾ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್, ಕಾನ್ಪುರ್ ಸಿಟಿ ಟ್ರಾನ್ಸ್‌ಪೋರ್ಟ್ ಸರ್ವಿಸಸ್ ಲಿಮಿಟೆಡ್ ಮತ್ತು ಕೇರಳ ಅರ್ಬನ್ ರೋಡ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಶನ್ ಗಳಲ್ಲಿ ಮಾತ್ರವೇ ವಿಶೇಷಚೇತನ ವ್ಯಕ್ತಿಗಳಿಗೆ ಅನುಕೂಲವಾಗುವ ಸೌಲಭ್ಯಗಳಿವೆ ಎಂದು ತಿಳಿಸಿದ್ದರು.

1989 ರ  ಕೇಂದ್ರ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿ ತಂದ ಬಳಿಕವೂ ಬಸ್ ಗಳಲ್ಲಿ ವಿಶೇಷಚೇತನ ಸ್ನೇಹಿ ಪ್ರವೇಶ, ನಿರ್ಗಮನದ ವ್ಯವಸ್ಥೆಗಳು ಬಂದಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ಕಾಂಗ್ರೆಸ್ ಸಂಸದ ಅಮೀ ಯಜ್ನಿಕ್ ಕೇಳಿದ್ದರು. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗಡ್ಕರಿ, ವಿಶೇಷಚೇತನ ಸ್ನೇಹಿ ವ್ಯವಸ್ಥೆಗಳನ್ನು ಅಳವಡಿಸಲು ಸಚಿವಾಲಯ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT