ಸಂಜಯ್ ರಾವತ್ 
ದೇಶ

ಕಿಟಕಿಗಳಿಲ್ಲದ ಕೊಠಡಿಯಲ್ಲಿ ನನ್ನನ್ನು ಇರಿಸಲಾಗಿತ್ತು: ಕೋರ್ಟ್ ಗೆ ರಾವತ್ ಹೇಳಿಕೆ 

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನಕ್ಕೆ ಒಳಗಾಗಿರುವ ಶಿವಸೇನೆ ನಾಯಕ ಸಂಜಯ್ ರಾವತ್, ತಮ್ಮನ್ನು ಜಾರಿ ನಿರ್ದೇಶನಾಲಯ ಕಿಟಕಿಗಳಿಲ್ಲದ, ಗಾಳಿ ಬೆಳಕು ಇಲ್ಲದ ಕೊಠಡಿಯಲ್ಲಿ ಇರಿಸಿತ್ತು ಎಂದು ಕೋರ್ಟ್ ಗೆ ಹೇಳಿದ್ದಾರೆ. 

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನಕ್ಕೆ ಒಳಗಾಗಿರುವ ಶಿವಸೇನೆ ನಾಯಕ ಸಂಜಯ್ ರಾವತ್, ತಮ್ಮನ್ನು ಜಾರಿ ನಿರ್ದೇಶನಾಲಯ ಕಿಟಕಿಗಳಿಲ್ಲದ, ಗಾಳಿ ಬೆಳಕು ಇಲ್ಲದ ಕೊಠಡಿಯಲ್ಲಿ ಇರಿಸಿತ್ತು ಎಂದು ಕೋರ್ಟ್ ಗೆ ಹೇಳಿದ್ದಾರೆ. 
 
ಎಂಎಂಎಲ್ಎ ಪ್ರಕರಣಗಳ ವಿಚಾರಣೆಗೆಂದೇ ನಿಯೋಜಿಸಲಾಗಿರುವ ವಿಶೇಷ ಕೋರ್ಟ್ ನ ನ್ಯಾಯಾಧೀಶರಾದ ಎಂಜಿ ದೇಶಪಾಂಡೆ ಅವರಿದ್ದ ಪೀಠಕ್ಕೆ ರಾವತ್ ಹೇಳಿದ್ದಾರೆ.ರಾವತ್ ಇಡಿ ವಶದ ಅವಧಿಯನ್ನು ಆ.08 ವರೆಗೂ ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ವಿಚಾರಣೆಯ ವೇಳೆ ಜಾರಿ ನಿರ್ದೇಶನಾಲಯದ ವಿರುದ್ಧ ಏನಾದರೂ ದೂರುಗಳಿವೆಯೇ? ಎಂಬ ಕೋರ್ಟ್ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ರಾವತ್ ತಮ್ಮನ್ನು ಗಾಳಿ, ಬೆಳಕು, ಕಿಟಕಿಗಳಿಲ್ಲದ ಕೊಠಡಿಯಲ್ಲಿ ಇರಿಸಲಾಗಿದೆ ಎಂದು ಆರೋಪಿಸಿದ್ದಾರೆ. 

ಇದಕ್ಕೆ ಕೋರ್ಟ್ ಜಾರಿ ನಿರ್ದೇಶನಾಲಯದಿಂದ ವಿವರಣೆ ಕೇಳಿದೆ. ಆದರೆ ಜಾರಿ ನಿರ್ದೇಶನಲಾಯದ ಪರವಾಗಿ ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್, ಹಿತನ್ ವೆನೆಗಾವ್ಕರ್, ರಾವತ್ ಅವರನ್ನು ಹವಾನಿಯಂತ್ರಿತ ಕೊಠಡಿಯಲ್ಲಿ ಇರಿಸಲಾಗಿತ್ತು ಅಲ್ಲಿ ಕಿಟಕಿಗಳಿಲ್ಲ ಎಂದು ಹೇಳಿದರು. ಹವಾನಿಯಂತ್ರಣದ ವ್ಯವಸ್ಥೆ ಇದೆಯಾದರೂ ಅದನ್ನು ತಮ್ಮ ಆರೋಗ್ಯ ಕಾರಣಗಳಿಂದಾಗಿ ಉಪಯೋಗಿಸಲು ಸಾಧ್ಯವಿಲ್ಲ ಎಂದು ರಾವತ್ ಕೋರ್ಟ್ ಗೆ ಹೇಳಿದ್ದಾರೆ.ರಾವತ್ ಹೇಳಿಕೆಯ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ವ್ಯವಸ್ಥೆ ಇರುವ ಕೊಠಡಿ ನೀಡಲಾಗುವುದು ಎಂದು ಜಾರಿ ನಿರ್ದೇಶನಾಲಯ ಕೋರ್ಟ್ ಗೆ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT