82 ವರ್ಷದ ದಯಾಬಾಯಿ 
ದೇಶ

ದೆಹಲಿ: ಆರೋಗ್ಯ ಸೇವೆಗೆ ಒತ್ತಾಯಿಸಿ 82 ವರ್ಷದ ವೃದ್ಧೆಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಕಾಸರಗೋಡು ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರಿಗೆ ವಿಶೇಷ ಆರೋಗ್ಯ ಸೇವೆ ನೀಡುವಂತೆ ಒತ್ತಾಯಿಸಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ 82 ವರ್ಷದ ದಯಾಬಾಯಿ ಅವರು ಕೇರಳದ ಸೆಕ್ರೆಟರಿಯೇಟ್ ಎದುರು ನಾಳೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ಕಾಸರಗೋಡು: ಕಾಸರಗೋಡು ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರಿಗೆ ವಿಶೇಷ ಆರೋಗ್ಯ ಸೇವೆ ನೀಡುವಂತೆ ಒತ್ತಾಯಿಸಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ 82 ವರ್ಷದ ದಯಾಬಾಯಿ ಅವರು ಕೇರಳದ ಸೆಕ್ರೆಟರಿಯೇಟ್ ಎದುರು ನಾಳೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ನಮ್ಮ ಬೇಡಿಕೆಗಳು ವಿಶೇಷವೇನೂ ಅಲ್ಲ. ಆರೋಗ್ಯ ರಕ್ಷಣೆ ಜೀವನದ ಹಕ್ಕು. ಇದು ಮೂಲಭೂತ ಹಕ್ಕು ಎಂದು ಅವರು ಹೇಳಿದ್ದಾರೆ.

ಏಮ್ಸ್ ಸ್ಥಾಪನೆಗಾಗಿ  ಉದ್ದೇಶಿತ ಸ್ಥಳಗಳ ಪಟ್ಟಿಯಲ್ಲಿ ಕಾಸರಗೋಡು ಸೇರಿಸಬೇಕು, ಎಂಡೋಸಲ್ಫಾನ್ ರೋಗಿಗಳಿಗೆ ವಿಶೇಷ ವೈದ್ಯಕೀಯ ಸೇವೆ ಲಭ್ಯವಾಗುವಂತೆ ಮಾಡುವುದು ಮತ್ತು ಮೂರು, ಎಂಡೋಸಲ್ಫಾನ್ ರೋಗಿಗಳಿಗೆ ಡೇ ಕೇರ್ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದು ದಯಾಬಾಯಿ ಅವರ ಪ್ರಮುಖ ಮೂರು ಬೇಡಿಕೆಗಳಾಗಿವೆ.

ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಕರ್ನಾಟಕ ಸರ್ಕಾರ ಅವಕಾಶ ನೀಡದ ಕಾರಣ ಜಿಲ್ಲೆಯ ಗಡಿಯಲ್ಲಿ 20 ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾಗೀ ಕಾಸರಗೋಡಿನಲ್ಲಿ ಏಮ್ಸ್ ಸ್ಥಾಪಿಸಬೇಕು ಎಂದು ಅವರು ಹೇಳಿದ್ದಾರೆ. ತನಗೆ 82 ವರ್ಷ ಆದರೆ 28 ವರ್ಷ ಎಂದು ಭಾವಿಸಿ ಸುದೀರ್ಘ ಉಪವಾಸ ಸತ್ಯಾಗ್ರಹಕ್ಕೆ ಸಿದ್ಧ ಎನ್ನುತ್ತಾರೆ ದಯಾಬಾಯಿ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

1st T20I: ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

35 ಎಸೆತಗಳಲ್ಲಿ 84 ರನ್: 5000 ರನ್ ಸೇರಿದಂತೆ ಒಂದೇ ಪಂದ್ಯದಲ್ಲಿ 5 ದಾಖಲೆ ಮುರಿದ ಅಭಿಷೇಕ್ ಶರ್ಮಾ

ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

SCROLL FOR NEXT