ಸಾಂದರ್ಭಿಕ ಚಿತ್ರ 
ದೇಶ

ಪ್ರತಿಪಕ್ಷಗಳ ಗಲಾಟೆ: ಮಧ್ಯಾಹ್ನ 2 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿಕೆ

ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ನವದೆಹಲಿ: ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಸದನವು ಸಭೆ ಸೇರಿದ ತಕ್ಷಣವೇ ಕಾಂಗ್ರೆಸ್ ಸೇರಿದಂತೆ ಇತರೆ ಪ್ರತಿಪಕ್ಷ ಸದಸ್ಯರು ಇ.ಡಿ ಕ್ರಮ, ಬೆಲೆ ಏರಿಕೆ ಮತ್ತು ಇತರ ವಿಷಯಗಳನ್ನು ಪ್ರಸ್ತಾಪಿಸಲು ಬಯಸಿದರು.

ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಕಾಂಗ್ರೆಸ್ ಒಡೆತನದ ಪತ್ರಿಕೆ ನ್ಯಾಷನಲ್ ಹೆರಾಲ್ಡ್ ಆವರಣದಲ್ಲಿದ್ದ ಯಂಗ್ ಇಂಡಿಯಾ ಕಂಪನಿಯ ಕಚೇರಿಗೆ ಬುಧವಾರ ಇ.ಡಿ ತಾತ್ಕಾಲಿಕವಾಗಿ ಬೀಗ ಹಾಕಿದೆ.

ಈ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ನುಗ್ಗಿದರು. ಈ ವೇಳೆ ಸ್ಪೀಕರ್ ಓಂ ಬಿರ್ಲಾ ಅವರು, ಸದಸ್ಯರು ತಮ್ಮ ಸ್ಥಾನಗಳಿಗೆ ಹಿಂತಿರುಗುವಂತೆ ಮನವಿ ಮಾಡಿದರು. ಆದರೆ, ಅವರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.

ಗದ್ದಲ ಮುಂದುವರಿದಾಗ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಇನ್ನೊಂದೆಡೆ ರಾಜ್ಯಸಭೆಯಲ್ಲೂ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವ ವಿಚಾರವನ್ನು ಎತ್ತಿದರು. ಇದೇ ವಿಚಾರವಾಗಿ ವಿಪಕ್ಷಗಳ ಗದ್ದಲ ಮುಂದುವರಿಸಿದ್ದರಿಂದ ರಾಜ್ಯಸಭೆಯನ್ನೂ 12 ಗಂಟೆವರೆಗೆ ಮುಂದೂಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT