ಅರ್ಪಿತಾ ಮುಖರ್ಜಿ, ಪಾರ್ಥ ಚಟರ್ಜಿ 
ದೇಶ

ಎಸ್ ಎಸ್ ಸಿ ಹಗರಣ: ಪಾರ್ಥ ಚಟರ್ಜಿ, ಅರ್ಪಿತಾ ಮುಖರ್ಜಿ 14 ದಿನ ಜೈಲುಪಾಲು

ಶಾಲಾ ಶಿಕ್ಷಕರ ಅಕ್ರಮ ನೇಮಕಾತಿ  ಹಗರಣದಲ್ಲಿ ಬಂಧಿತರಾಗಿರುವ ತೃಣಮೂಲಕ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 18 ರಂದು ನಡೆಯಲಿದೆ.

ಕೊಲ್ಕತ್ತ: ಶಾಲಾ ಶಿಕ್ಷಕರ ಅಕ್ರಮ ನೇಮಕಾತಿ  ಹಗರಣದಲ್ಲಿ ಬಂಧಿತರಾಗಿರುವ ತೃಣಮೂಲಕ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 18 ರಂದು ನಡೆಯಲಿದೆ.

ಜಾರಿ ನಿರ್ದೇಶನಾಲಯ ಬಂಗಾಳದ ಮಾಜಿ ಶಿಕ್ಷಣ ಸಚಿವ ಮತ್ತು ಅರ್ಪಿತಾ ಮುಖರ್ಜಿಯನ್ನು 14 ದಿನ ಕಸ್ಟಡಿಗೆ ಕೇಳಿತ್ತು. ಪ್ರಕರಣದಲ್ಲಿ ಹೊಸ ಬೆಳವಣಿಗೆ ಕುರಿತು ಇಬ್ಬರು ಆರೋಪಿಗಳನ್ನು ವಿಚಾರಣೆ ನಡೆಸಬೇಕಾಗಿದೆ ಎಂದು ತನಿಖಾ ಸಂಸ್ಥೆಯ ವಕೀಲರು ಹೇಳಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿಬೋನ್ ಕುಮಾರ್ ಸಾಧು ಅವರು ಪ್ರಕರಣದ ಎಲ್ಲಾ ಕಕ್ಷಿದಾರರ ವಾದ ಆಲಿಸಿದ ನಂತರ ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ.

ಪಾರ್ಥ ಚಟರ್ಜಿ ಮತ್ತುು ಅರ್ಪಿತಾ ಮುಖರ್ಜಿ ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಅಕ್ರಮ ನೇಮಕಾತಿಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜುಲೈ 23 ರಂದು ಬಂಧನಕ್ಕೊಳಗಾಗಿದ್ದರು. ಪಾರ್ಥ ಚಟರ್ಜಿ ಅವರ ಒಡೆತನದ ಫ್ಲಾಟ್ ಗಳಿಂದ 49.8 ಕೋಟಿ ರೂ. ನಗದು, ಅಪಾರ ಪ್ರಮಾಣದ ಚಿನ್ನಾಭರಣ, ಆಸ್ತಿಗಳ ದಾಖಲೆಗಳು ಮತ್ತಿಬ್ಬರು ಆರೋಪಿಗಳು ಹೊಂದಿರುವ ಕಂಪನಿಯ ಜಂಟಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಹೇಳಿಕೊಂಡಿದೆ.

ಪಾರ್ಥ ಚಟರ್ಜಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವ ಸ್ಥಾನದಿಂದ ಕಿತ್ತೆಸೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಅವರು ಹೊಂದಿದ್ದ ಎಲ್ಲಾ ಹುದ್ದೆಗಳಿಂದ ತೆರವು ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel