ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ 
ದೇಶ

ರಾಜ್ಯಗಳ ವಿರುದ್ಧ ಕೇಂದ್ರದ 'ತಾರತಮ್ಯ' ಪ್ರತಿಭಟಿಸಿ ನೀತಿ ಆಯೋಗ ಸಭೆಗೆ ಕೆಸಿಆರ್ ಬಹಿಷ್ಕಾರ 

ರಾಜ್ಯಗಳ ವಿರುದ್ಧ ಕೇಂದ್ರದ ತಾರತಮ್ಯ' ಧೋರಣೆ ವಿರೋಧಿಸಿ ತೀವ್ರ ಪ್ರತಿಭಟನೆಯ ಸಂಕೇತವಾಗಿ ಆಗಸ್ಟ್ 7 ರಂದು ನಡೆಯಲಿರುವ ನೀತಿ ಆಯೋಗದ 7 ನೇ ಆಡಳಿತ ಮಂಡಳಿ ಸಭೆಯನ್ನು ಬಹಿಷ್ಕರಿಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ. 

ಹೈದರಾಬಾದ್: ರಾಜ್ಯಗಳ ವಿರುದ್ಧ ಕೇಂದ್ರದ ತಾರತಮ್ಯ' ಧೋರಣೆ ವಿರೋಧಿಸಿ ತೀವ್ರ ಪ್ರತಿಭಟನೆಯ ಸಂಕೇತವಾಗಿ ಆಗಸ್ಟ್ 7 ರಂದು ನಡೆಯಲಿರುವ ನೀತಿ ಆಯೋಗದ 7 ನೇ ಆಡಳಿತ ಮಂಡಳಿ ಸಭೆಯನ್ನು ಬಹಿಷ್ಕರಿಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ. 

ರಾಜ್ಯಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಕೆಸಿಆರ್  ಮೋದಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ. ಬಲಿಷ್ಠ ಮತ್ತು ಆರ್ಥಿಕವಾಗಿ ಚೈತನ್ಯವಿರುವ ರಾಜ್ಯಗಳು ಮಾತ್ರ ರಾಷ್ಟ್ರವನ್ನು ಬಲಿಷ್ಠಗೊಳಿಸಬಲ್ಲವು ಎಂದು ಅವರು ತಿಳಿಸಿದ್ದಾರೆ.

ಈ ಸತ್ಯಗಳ ದೃಷ್ಟಿಯಿಂದ, ಆಗಸ್ಟ್ 7, 2022 ರಂದು ನಡೆಯಲಿರುವ ನೀತಿ ಆಯೋಗದ 7 ನೇ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸಲು ನನಗೆ ಪ್ರಯೋಜನವಾಗುತ್ತಿಲ್ಲ ಮತ್ತು  ಕೇಂದ್ರದ ವಿರುದ್ಧದ ತೀವ್ರ ಪ್ರತಿಭಟನೆಯ ಸಂಕೇತವಾಗಿ ನಾನು ಅದರಿಂದ ದೂರವಿದ್ದೇನೆ ಎಂದಿದ್ದಾರೆ.

ರಾಷ್ಟ್ರವನ್ನು ಬಲಿಷ್ಠ ಮತ್ತು ಅಭಿವೃದ್ಧಿಗೊಳಿಸುವ ನಮ್ಮ ಸಾಮೂಹಿಕ ಪ್ರಯತ್ನದಲ್ಲಿ ರಾಜ್ಯಗಳ ವಿರುದ್ಧ ತಾರತಮ್ಯ ಮತ್ತು ಸಮಾನ ಪಾಲುದಾರರಾಗಿ ಪರಿಗಣಿಸದ  ಕೇಂದ್ರ ಸರ್ಕಾರದ ಪ್ರವೃತ್ತಿ ನೀತಿ ಆಯೋಗದ ಸಭೆ ಬಹಿಷ್ಕಾರಕ್ಕೆ ಕಾರಣ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT