ಪ್ರಾತಿನಿಧಿಕ ಚಿತ್ರ 
ದೇಶ

ಪ್ರಿಯಕರನೊಂದಿಗಿನ ಸಂಬಂಧ ಕಡಿದುಕೊಳ್ಳಲು ಒಪ್ಪದ ಮಗಳು: ಆಕೆಯನ್ನು ಕೊಲ್ಲಲು ಸುಪಾರಿ ನೀಡಿದ ತಂದೆ!

ಮಗಳು ಆಕೆಯ ಪ್ರಿಯಕರನೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲಿಲ್ಲ ಎಂದು ಕೋಪಗೊಂಡ ತಂದೆಯೊಬ್ಬರು, ಆಸ್ಪತ್ರೆಯ ವಾರ್ಡ್ ಬಾಯ್‌ಗೆ ಆಕೆಯನ್ನು ಕೊಲ್ಲಲು ಸುಪಾರಿ ನೀಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ.

ಮೀರತ್: ಮಗಳು ಆಕೆಯ ಪ್ರಿಯಕರನೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲಿಲ್ಲ ಎಂದು ಕೋಪಗೊಂಡ ತಂದೆಯೊಬ್ಬರು, ಆಸ್ಪತ್ರೆಯ ವಾರ್ಡ್ ಬಾಯ್‌ಗೆ ಆಕೆಯನ್ನು ಕೊಲ್ಲಲು ಸುಪಾರಿ ನೀಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ. ಗುತ್ತಿಗೆ ಕೊಲೆಗಾರ, 17 ವರ್ಷದ ಬಾಲಕಿಗೆ ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಂ ಕ್ಲೋರೈಡ್ ಅನ್ನು ಇಂಜೆಕ್ಷನ್ ಮೂಲಕ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್

ಬಳಿಕ ಆಕೆಯ ಆರೋಗ್ಯ ಸ್ಥಿತಿ ಇದ್ದಕ್ಕಿಂದ್ದಂತೆ ಹದಗೆಟ್ಟಾಗ, ಆಕೆಗೆ ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಂ ಕ್ಲೋರೈಡ್‌ನ ಚುಚ್ಚುಮದ್ದು ನೀಡಿರುವುದು ವೈದ್ಯರಿಗೆ ತಿಳಿದುಬಂದಿದೆ. ಈ ಸಂಬಂಧ ಬಾಲಕಿಯ ತಂದೆ ನವೀನ್ ಕುಮಾರ್, ವಾರ್ಡ್ ಬಾಯ್ ನರೇಶ್ ಕುಮಾರ್ ಮತ್ತು ಆಸ್ಪತ್ರೆಯ ಮಹಿಳಾ ಉದ್ಯೋಗಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ನವೀನ್ ಕುಮಾರ್, ತಮ್ಮ ಮಗಳನ್ನು ಕಂಕರಖೇಡದ ಆಸ್ಪತ್ರೆಗೆ ದಾಖಲಿಸಿದ್ದರು. ಕೆಲವು ಗಂಟೆಗಳ ನಂತರ, ಆಕೆಯನ್ನು ಮೋದಿಪುರಂನ ಫ್ಯೂಚರ್ ಪ್ಲಸ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಅಲ್ಲಿ, ಆಕೆಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆಕೆಗೆ ಚುಚ್ಚುಮದ್ದು ನೀಡಿದ ವ್ಯಕ್ತಿಯ ಗುರುತು ಪತ್ತೆಹಚ್ಚಲಾಗಿದ್ದು, ವಾರ್ಡ್ ಬಾಯ್ ನರೇಶ್ ಕುಮಾರ್‌ನನ್ನು ವಶಕ್ಕೆ ಪಡೆಯಲಾಗಿದೆ.

ಬಾಲಕಿಯನ್ನು ಕೊಲ್ಲಲು ಆಕೆಯ ತಂದೆ ₹ 1 ಲಕ್ಷ ನೀಡಿದ್ದರು ಎಂದು ವಾರ್ಡ್ ಬಾಯ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಆಸ್ಪತ್ರೆಯ ಮಹಿಳಾ ಉದ್ಯೋಗಿಯ ಸಹಾಯದಿಂದ ವೈದ್ಯನಂತೆ ನಟಿಸಿ ಐಸಿಯುಗೆ ಪ್ರವೇಶಿಸಿ ಬಾಲಕಿಗೆ ಚುಚ್ಚುಮದ್ದು ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಮಗಳು ಒಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾಳೆ. ನಮ್ಮ ಕುಟುಂಬ ಸದಸ್ಯರು ಪದೇ ಪದೇ ವಿನಂತಿ ಮಾಡಿದ ಬಳಿಕವೂ ಆಕೆ, ಆತನೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

ನನ್ನ ಮಗಳು ಮನೆಯ ಟೆರೇಸ್‌ನಿಂದ ಆಕಸ್ಮಿಕವಾಗಿ ಬಿದ್ದಿದ್ದಾಳೆ ಎಂದು ಆಸ್ಪತ್ರೆಯ ವೈದ್ಯರಿಗೆ ತಿಳಿಸಿದ್ದನು. ಪೊಲೀಸರು ವಾರ್ಡ್ ಬಾಯ್‌ನಿಂದ ಪೊಟ್ಯಾಸಿಯಂ ಕ್ಲೋರೈಡ್ ಹೊಂದಿರುವ ಸಿರಿಂಜ್ ಮತ್ತು ₹ 90,000 ನಗದನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT