ನಿತೀಶ್ ಕುಮಾರ್ 
ದೇಶ

ಬಿಹಾರ: ಅನಿಶ್ಚಿತತೆಯಲ್ಲಿ ಎನ್‌ಡಿಎ ಭವಿಷ್ಯ; ಜೆಡಿಯು ಸಭೆಗೂ ಮುನ್ನ ಬಿಜೆಪಿ ಎಚ್ಚರಿಕೆಯ ಹೆಜ್ಜೆ

ಬಿಜೆಪಿಯೊಂದಿಗೆ ಜೆಡಿಯು ಸಂಬಂಧ ಹದಗೆಟ್ಟಿರುವಂತೆಯೇ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಪಕ್ಷದ ಸಂಸದರು ಮತ್ತು ಶಾಸಕರ ಸಭೆ ಕರೆದಿದ್ದಾರೆ. ಈ ಮಧ್ಯೆ ಬಿಹಾರದಲ್ಲಿ ಮೈತ್ರಿ ಧರ್ಮ ಪಾಲಿಸಲಾಗುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ. 

ನವದೆಹಲಿ: ಬಿಜೆಪಿಯೊಂದಿಗೆ ಜೆಡಿಯು ಸಂಬಂಧ ಹದಗೆಟ್ಟಿರುವಂತೆಯೇ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಪಕ್ಷದ ಸಂಸದರು ಮತ್ತು ಶಾಸಕರ ಸಭೆ ಕರೆದಿದ್ದಾರೆ. ಈ ಮಧ್ಯೆ ಬಿಹಾರದಲ್ಲಿ ಮೈತ್ರಿ ಧರ್ಮ ಪಾಲಿಸಲಾಗುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ. 

ಜೆಡಿಯು ಮೈತ್ರಿಯನ್ನು ಮರುಪರಿಶೀಲಿಸುತ್ತಿದೆ ಎಂಬ ಊಹಾಪೋಹಗಳ ಮಧ್ಯೆ  ಬಿಹಾರ ಮುಖ್ಯಮಂತ್ರಿಯ ನಿಕಟವರ್ತಿಯಾಗಿದ್ದ ಆರ್ ಸಿಪಿ ಸಿಂಗ್, ಕುಮಾರ್ ಮತ್ತು ಚಿರಾಗ್ ಪಾಸ್ವಾನ್ ಅವರ ರಾಜಕೀಯ ಭವಿಷ್ಯ ಪತನಕ್ಕೆ ಸಂಬಂಧಿಸಿದಂತೆ  ಮಿತ್ರಪಕ್ಷದ ಆರೋಪದ ಬಗ್ಗೆ ಹಿರಿಯ ಬಿಜೆಪಿ ನಾಯಕರು ಮೌನವನ್ನು ವಹಿಸಿದ್ದಾರೆ. ಕುಮಾರ್ ಏನು ಮಾಡುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟ, ನಾವು ಕಾದು ನೋಡುತ್ತೇವೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದರು.

2020 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಪಾಸ್ವಾನ್ ಅವರ ನಿರ್ಧಾರವು ಅದರ ನಿರೀಕ್ಷೆಯನ್ನು ಭಾರಿ ಪ್ರಮಾಣದಲ್ಲಿ ಕೆಡಿಸಿತು ಮತ್ತು ಅದರ ಅಧ್ಯಕ್ಷ ಲಾಲನ್ ಸಿಂಗ್ ಅವರು ಭಾನುವಾರ ಇದು ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಸಿಪಿ ಸಿಂಗ್‌ಗೆ ಸಂಬಂಧಿಸಿದ ಬೆಳವಣಿಗೆಯು  ಚಿರಾಗ್ ಮಾದರಿ ಆಧಾರಿತ ಮತ್ತೊಂದು ಪ್ರಯತ್ನವಾಗಿದೆ ಎಂದು ಅವರು ಯಾವುದೇ ಪಕ್ಷವನ್ನು ಹೆಸರಿಸದೆ ಹೇಳಿದ್ದಾರೆ.

2024 ಮತ್ತು 2025ರಲ್ಲಿ ನಡೆಯಲಿರುವ ಮುಂದಿನ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಜೆಡಿ(ಯು) ಜೊತೆಗಿನ ಮೈತ್ರಿ ಮುಂದುವರಿಯಲಿದೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಪಾಟ್ನಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮ ನಾಯಕರಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಅದರ ನಂತರ ಜೆಡಿಯು ದೂರು ನೀಡಲು ಯಾವುದೇ ಕಾರಣಗಳನ್ನು ಹೊಂದಿರಬಾರದು ಎಂದು ಬಿಜೆಪಿ ನಾಯಕರೊಬ್ಬರು ಹೇಳಿದರು. ಆದಾಗ್ಯೂ, ಕೇಂದ್ರ ಸಚಿವ ಸಂಪುಟದಲ್ಲಿ ಮೂರು ಸ್ಥಾನ ನೀಡುವಲ್ಲಿ ಬಿಜೆಪಿ ನಿರ್ಲಕ್ಷ್ಯ ಬಗ್ಗೆ ಜೆಡಿಯು ಕೂಡ ಅಸಮಾಧಾನ ವ್ಯಕ್ತಪಡಿಸುತ್ತಿದೆ.

ಕೇಸರಿ ಪಕ್ಷದ ಸೈದ್ಧಾಂತಿಕ ಅಜೆಂಡಾ ಜೊತೆಗೆ ಆಗಾಗ್ಗೆ ಕುಮಾರ್ ಅವರ ಆಡಳಿತವನ್ನು ಪ್ರಶ್ನಿಸುವ ಬಿಹಾರ ಬಿಜೆಪಿ ನಾಯಕರ ಹೇಳಿಕೆಗಳು ಜೆಡಿಯು ನಿಲುವಿಗೆ ಹೊಂದಿಕೆಯಾಗುವುದಿಲ್ಲ ಎಂದು ಪರಿಗಣಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT