ಮುಖ್ಯಮಂತ್ರಿ ನಿತೀಶ್ ಕುಮಾರ್ 
ದೇಶ

ಬಿಹಾರದಲ್ಲಿ ಮಹಾ ವಿಕಾಸ್ ಆಘಾಡಿ ಮಾದರಿ ಸರ್ಕಾರ? ಆರ್ ಜೆಡಿ, ಕಾಂಗ್ರೆಸ್, ಎಡಪಕ್ಷಗಳ ಬೆಂಬಲ; ನಿತೀಶ್ ಬಿಜೆಪಿ ಸಖ್ಯ ತೊರೆಯುವ ಸಾಧ್ಯತೆ

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಬಿಹಾರದಲ್ಲಿ ಎಲ್ಲಾ ಎನ್‌ಡಿಎಯೇತರ ಪಕ್ಷಗಳನ್ನು ಒಳಗೊಂಡಿರುವ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮಾದರಿಯ ಸಮ್ಮಿಶ್ರ ಸರ್ಕಾರ ರಚನೆಗೆ ಬೇಕಾದ ಎಲ್ಲಾ ರೀತಿಯ ಸಿದ್ಧತೆ ಮಾಡಲಾಗುತ್ತಿದೆ. 

ಪಾಟ್ನಾ:  ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಬಿಹಾರದಲ್ಲಿ ಎಲ್ಲಾ ಎನ್‌ಡಿಎಯೇತರ ಪಕ್ಷಗಳನ್ನು ಒಳಗೊಂಡಿರುವ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮಾದರಿಯ ಸಮ್ಮಿಶ್ರ ಸರ್ಕಾರ ರಚನೆಗೆ ಬೇಕಾದ ಎಲ್ಲಾ ರೀತಿಯ ಸಿದ್ಧತೆ ಮಾಡಲಾಗುತ್ತಿದೆ. 

ನಿತೀಶ್ ಕುಮಾರ್ ಅವರು ಈಗಾಗಲೇ ಹಂಗಾಮಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮೂರು ಎಡಪಕ್ಷಗಳಾದ ಸಿಪಿಐ (ಎಂಎಲ್), ಸಿಪಿಐ (ಎಂ), ಮತ್ತು ಸಿಪಿಐ, ಪ್ರಮುಖ ವಿರೋಧ ಪಕ್ಷ ಆರ್‌ಜೆಡಿಯ ನಾಯಕರಾದ ಲಾಲು ಪ್ರಸಾದ್ ಯಾದವ್ ಮತ್ತು ತೇಜಸ್ವಿ ಯಾದವ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಬೆಂಬಲಿಸಲು ಎಲ್ಲ ವಿರೋಧ ಪಕ್ಷಗಳು ಒಪ್ಪಿಗೆ ಸೂಚಿಸಿರುವುದರಿಂದ ಮೈತ್ರಿ ರಚನೆ ಕಾರ್ಯ ನಡೆದಿದೆ. ಮೂಲಗಳ ಪ್ರಕಾರ, ಈ ವಾರದೊಳಗೆ ಪ್ರಮಾಣವಚನ ಸ್ವೀಕರಿಸುವ ಹೊಸ ಸರ್ಕಾರಕ್ಕೆ ಎಲ್ಲಾ ಬೆಂಬಲಿತ ಪಕ್ಷಗಳು ಸೇರುವ ಸಾಧ್ಯತೆಯಿದೆ.

ಎಲ್ಲಾ ಎನ್‌ಡಿಎಯೇತರ ಪಕ್ಷಗಳು ತಮ್ಮ ಶಾಸಕರನ್ನು ಪಾಟ್ನಾಕ್ಕೆ ಕರೆದಿದ್ದು, ಹೊಸ ಸರ್ಕಾರವನ್ನು ಬೆಂಬಲಿಸಲು ಔಪಚಾರಿಕ ಅನುಮೋದನೆಯನ್ನು ಅವರಿಂದ ಪಡೆಯಲಾಗುತ್ತಿದೆ. ಬಿಹಾರದ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭಕ್ತ ಚರಣ್ ದಾಸ್ ಅವರು  ಪಾಟ್ನಾಗೆ ಬಂದಿದ್ದಾರೆ.  ಮಂಗಳವಾರ ಪಾಟ್ನಾದಲ್ಲಿ ನಡೆಯಲಿರುವ ತನ್ನ ಸಂಸದರು ಮತ್ತು ಶಾಸಕರ ಸಭೆಯ ನಂತರ ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಳ್ಳುವ ಔಪಚಾರಿಕ ಘೋಷಣೆಯನ್ನು ಜೆಡಿಯು ಮಾಡುವ ಸಾಧ್ಯತೆಯಿದೆ.

ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅವರು  ಬಿಜೆಪಿಯನ್ನು ಹೆಸರಿಸದೆ ದಾಳಿ ಮಾಡುವ ಮೂಲಕ ಬಿಹಾರದ ರಾಜಕೀಯವು ಭಾನುವಾರ ನಿರ್ಣಾಯಕ ತಿರುವು ಪಡೆದುಕೊಂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಅಭ್ಯರ್ಥಿಗಳನ್ನು ಸೋಲಿಸಲು ಈ ಹಿಂದೆ ಪ್ರಯತ್ನಗಳು ನಡೆದಿವೆ ಎಂದು ಸಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT