ಸಾಂದರ್ಭಿಕ ಚಿತ್ರ 
ದೇಶ

5 ಲಕ್ಷ ಮುಸ್ಲಿಂ ಮನೆಗಳು, ಮದರಸಾ, ದರ್ಗಾಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಬಿಜೆಪಿ ತಯಾರಿ

ಸ್ವಾತಂತ್ರ್ಯದ ಅಮೃತ ಮಹೋತ್ಸವದ 'ಹರ್ ಘರ್ ತಿರಂಗಾ' ಅಭಿಯಾನದ ಅಂಗವಾಗಿ ಆಗಸ್ಟ್ 15 ರಂದು ಸುಮಾರು 5 ಲಕ್ಷ ಮುಸ್ಲಿಂ ಮನೆಗಳು, ಮದರಾಸ ಮತ್ತು ದರ್ಗಾಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು  ಉತ್ತರ ಪ್ರದೇಶ ಬಿಜೆಪಿ ನಿರ್ಧರಿಸಿದೆ. ಆಗಸ್ಟ್ 12 ರಿಂದ ಮೂರು ದಿನ ಬಿಜೆಪಿ ಮುಸ್ಲಿಂ ಮೋರ್ಚಾ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಿದೆ. 

ಲಖನೌ: ಸ್ವಾತಂತ್ರ್ಯದ ಅಮೃತ ಮಹೋತ್ಸವದ 'ಹರ್ ಘರ್ ತಿರಂಗಾ' ಅಭಿಯಾನದ ಅಂಗವಾಗಿ ಆಗಸ್ಟ್ 15 ರಂದು ಸುಮಾರು 5 ಲಕ್ಷ ಮುಸ್ಲಿಂ ಮನೆಗಳು, ಮದರಾಸ ಮತ್ತು ದರ್ಗಾಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಉತ್ತರ ಪ್ರದೇಶ ಬಿಜೆಪಿ ನಿರ್ಧರಿಸಿದೆ. ಆಗಸ್ಟ್ 12 ರಿಂದ ಮೂರು ದಿನ ಬಿಜೆಪಿ ಮುಸ್ಲಿಂ ಮೋರ್ಚಾ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಿದೆ. 

ಮದರಸಾಗಳು ಮತ್ತು ದರ್ಗಾಗಳಲ್ಲಿ ಧ್ವಜಾರೋಹಣ ಮಾಡುವ ಫೋಟೋಗಳನ್ನು ಕ್ಲಿಕ್ ಮಾಡಿ ಮತ್ತು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವಂತೆ ಬಿಜೆಪಿ ಅಲ್ಪಸಂಖ್ಯಾತ ಘಟಕ ಹೇಳಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಯೋಜನೆಯನ್ನು ದೃಢಪಡಿಸಿರುವ  ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಕುನ್ವರ್ ಬಸಿತ್ ಅಲಿ, ಮದರಸಾ ಮತ್ತು ದರ್ಗಾಗಳಲ್ಲಿ ಹೆಚ್ಚಿನ ಜನ ಸೇರುವುದರಿಂದ ಸಂದೇಶವನ್ನು ಹರಡಲು ನೆರವಾಗುವುದರಿಂದ  ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

2017ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಸ್ವಾತಂತ್ರ್ಯ ದಿನದಂದು ರಾಜ್ಯದ ಮದರಸಾಗಳಲ್ಲಿ ಧ್ವಜಾರೋಹಣ ಮತ್ತು ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿತ್ತು ಎಂದು ಅಲಿ ಹೇಳಿದರು. ಬಿಜೆಪಿ ಮೂಲಗಳ ಪ್ರಕಾರ, ರಾಜ್ಯದಲ್ಲಿ 4 ಕೋಟಿಗೂ ಹೆಚ್ಚು ಮನೆಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ ಹೊಂದಲಾಗಿದೆ. 

ಈ ಮಧ್ಯೆ ಆಡಳಿತ ಪಕ್ಷದ ಈ ಯೋಜನೆಗೆ ಪ್ರತಿಕ್ರಿಯಿಸಿರುವ  ಸಮಾಜವಾದಿ ಪಕ್ಷದ ಮುಖ್ಯ ವಕ್ತಾರ ರಾಜೇಂದ್ರ ಚೌಧರಿ, ಇದು ತ್ರಿವರ್ಣ ಧ್ವಜವನ್ನು ರಾಜಕೀಯಗೊಳಿಸುವ ತಂತ್ರ ಎಂದು ಬಣ್ಣಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT