ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ಫಡ್ನವಿಸ್ 
ದೇಶ

ಬರೋಬ್ಬರಿ 40 ದಿನಗಳ ನಂತರ ಏಕನಾಥ್ ಶಿಂಧೆ ಸಂಪುಟ ನಾಳೆ ವಿಸ್ತರಣೆ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬರೋಬ್ಬರಿ 40 ದಿನಗಳ ನಂತರ ಆಗಸ್ಟ್ 9 ರಂದು ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಲಿದ್ದಾರೆ ಎಂದು ಮುಖ್ಯಮಂತ್ರಿಯ ಆಪ್ತರು ಸೋಮವಾರ ತಿಳಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬರೋಬ್ಬರಿ 40 ದಿನಗಳ ನಂತರ ಆಗಸ್ಟ್ 9 ರಂದು ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಲಿದ್ದಾರೆ ಎಂದು ಮುಖ್ಯಮಂತ್ರಿಯ ಆಪ್ತರು ಸೋಮವಾರ ತಿಳಿಸಿದ್ದಾರೆ.

ಜೂನ್ 30 ರಂದು ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಹಾಗೂ ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಅವರು ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಸಿಎಂ, ಡಿಸಿಎಂ ಇಬ್ಬರೇ ಸರ್ಕಾರ ನಡೆಸುತ್ತಿದ್ದಾರೆ.

ನಾಳೆ ಮಧ್ಯಾಹ್ನ 12 ಗಂಟೆಗೆ ರಾಜಭವನದಲ್ಲಿ ಸಚಿವ ಸಂಪುಟ ವಿಸ್ತರಣೆ ಸಮಾರಂಭ ನಡೆಯಲಿದ್ದು, ಒಂದು ಡಜನ್ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಶಿಂಧೆ ಅವರ ಆಪ್ತರು ಪಿಟಿಐಗೆ ತಿಳಿಸಿದ್ದಾರೆ. ನಂತರ ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

"ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವನ್ನು ಆದಷ್ಟು ಬೇಗ ನಡೆಸಬೇಕಾಗಿದೆ. ಆದ್ದರಿಂದ ನಾವು ಸಚಿವ ಸಂಪುಟ ವಿಸ್ತರಣೆ ಮಾಡಿ, 12 ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಲು ನಿರ್ಧರಿಸಿದ್ದೇವೆ. ಮಂಗಳವಾರ ಪ್ರಮಾಣ ವಚನ ಸ್ವೀಕರಿಸುವವರಲ್ಲಿ ಕೆಲವರು ವಿಧಾನ ಪರಿಷತ್ ಸದ್ಯರಾಗಿದ್ದಾರೆ" ಎಂದು ಆಪ್ತರು ತಿಳಿಸಿದ್ದಾರೆ.

ಶಿವಸೇನೆಯ ಬಹುಪಾಲು ಶಾಸಕರನ್ನು ತನ್ನೊಂದಿಗೆ ಕರೆದೊಯ್ಯುವಲ್ಲಿ ಯಶಸ್ವಿಯಾದ ನಂತರ ಅಚ್ಚರಿಯ ರೀತಿಯಲ್ಲಿ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ ಶಿಂಧೆ, ಅವರೆಲ್ಲರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸುವುದು ಕಷ್ಟಕರವಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಒಂದು ತಿಂಗಳಲ್ಲಿ ಶಿಂಧೆ ಅವರು ನವದೆಹಲಿಗೆ ಏಳು ಬಾರಿ ಭೇಟಿ ನೀಡಿದ್ದು, ಪ್ರತಿ ಭೇಟಿಯಲ್ಲೂ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂಬ ಮಾತು ಕೇಳಿಬರುತ್ತಿತ್ತು. ಆದರೆ ಅಂತಿಮವಾಗಿ ನಾಳೆ ಸಂಪುಟ ವಿಸ್ತರಣೆಯಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT