ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, 42 ಜನರು ಸೋಂಕಿನಿಂದ ಸಾವು

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಕಡಿಮೆಯಾಗಿದ್ದು, 42 ಜನರು ಸಾವಿಗೀಡಾಗಿದ್ದಾರೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,31,807ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 12,751 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,41,74,650 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,31,807ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಬೆಳಗ್ಗೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 42 ಜನರು ಸಾವಿಗೀಡಾಗುವುದರೊಂದಿಗೆ ಈವರೆಗೆ 5,26,772 ಜನರು ಸೋಂಕಿನಿಂದ ಪ್ರಾಣಕಳೆದುಕೊಂಡಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ 0.30ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.51ರಷ್ಟಾಗಿದೆ. ಇದೇ ವೇಳೆ ದೈನಂದಿನ ಪಾಸಿಟಿವಿಟಿ ದರ ಶೇ 3.50 ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 4,35,16,071 ಜನರು ಗುಣಮುಖರಾಗಿದ್ದಾರೆ. ಲಸಿಕೆ ಅಭಿಯಾನದ ಅಡಿಯಲ್ಲಿ ದೇಶದಾದ್ಯಂತ ಈವರೆಗೆ 206.88 ಕೋಟಿ ಕೋವಿಡ್ ಲಸಿಕೆ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT