ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ 
ದೇಶ

ಬಿಹಾರದಲ್ಲಿ ರಾಜಕೀಯ ಹೈಡ್ರಾಮಕ್ಕೆ ತೆರೆ: ಬಿಜೆಪಿಯೊಂದಿಗಿನ ಮೈತ್ರಿ ಮುರಿದ ಜೆಡಿಯು

ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬೀಳುವ ಸಮಯ ಬಂದಾಗಿದೆ. ಇಂದು ಪಕ್ಷದ ಸಂಸದರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಾಟ್ನಾ: ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬೀಳುವ ಸಮಯ ಬಂದಾಗಿದೆ. ಇಂದು ಪಕ್ಷದ ಸಂಸದರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೆಡಿಯು ಸಂಸದರು ಮತ್ತು ಶಾಸಕರ ಸಭೆ ಮುಕ್ತಾಯವಾಗಿದ್ದು, ಬಿಜೆಪಿ ಜೊತೆಗಿನ ಮೈತ್ರಿಯನ್ನು ಮುರಿದುಕೊಳ್ಳಲು ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲ ಫಾಗು ಚೌಹಾಣ್ ಅವರ ಭೇಟಿಗೆ ಸಂಜೆ 4 ಗಂಟೆಗೆ ಸಮಯ ಕೇಳಿದ್ದಾರೆ ಎನ್ನಲಾಗಿದೆ.

ಬಿಹಾರ ರಾಜಕೀಯಕ್ಕೆ ಸಂಬಂಧಿಸಿ ಹಲವು ಊಹಾಪೋಹಗಳು ಹರಿದಾಡುತ್ತಿರುವ ನಡುವೆಯೇ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಶಾಸಕರ ಸಭೆಗಳ ಮೇಲೆಯೇ ಎಲ್ಲ ಕಣ್ಣು ನೆಟ್ಟಿತ್ತು. ನಿತೀಶ್‌ಕುಮಾರ್ ಅವರು ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಂಡರೆ ಹೊಸ ಸರ್ಕಾರದ ರಚನೆಗೆ ಬೆಂಬಲ ನೀಡಲು ಕಾಂಗ್ರೆಸ್ ಈಗಾಗಲೇ ನಿರ್ಧರಿಸಿದೆ.

ಬಿಹಾರದಲ್ಲಿ ಜೆಡಿ(ಯು) ಪಕ್ಷಕ್ಕೆ ಆರ್‌.ಸಿ.ಪಿ. ಸಿಂಗ್‌ ರಾಜೀನಾಮೆ ಸಲ್ಲಿಸಿದ ಬಳಿಕ ಕ್ಷಿಪ್ರ ರಾಜಕೀಯ ಬೆಳವಣಿಗೆಗಳಾಗಿವೆ. ಸದ್ಯ ಜೆಡಿ(ಯು) ಕೇಂದ್ರ ಸಚಿವ ಸಂಪುಟದಿಂದ ಹೊರಗಿದೆ. ಆರ್‌.ಸಿ.ಪಿ. ಸಿಂಗ್ ರಾಜೀನಾಮೆ ನೀಡಿದ ನಂತರ ಯಾವುದೇ ಪ್ರಾತಿನಿಧ್ಯವಿಲ್ಲದೆ ಉಳಿದಿರುವ ಕೇಂದ್ರ ಸಚಿವ ಸಂಪುಟವನ್ನು ಸೇರುವುದಿಲ್ಲ ಎಂದು ಜೆಡಿ(ಯು) ಪಕ್ಷವು ಭಾನುವಾರ ಸ್ಪಷ್ಟಪಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT