ದೇವೇಗೌಡ 
ದೇಶ

ಬಿಹಾರದ ರಾಜಕೀಯ ಬೆಳವಣಿಗೆ ಬಗ್ಗೆ ದೇವೇಗೌಡ ಅಭಿಪ್ರಾಯ ಇದು...

ಬಿಹಾರದ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ದೇಶದ ರಾಜಕೀಯದಲ್ಲಿ ಜನತಾದಳ ಪರಿವಾರ ಮತ್ತೆ ಪರ್ಯಾಯ ಆಯ್ಕೆಯಾಗುತ್ತಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

ಬೆಂಗಳೂರು: ಬಿಹಾರದಲ್ಲಿ ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ಜೆಡಿಯು ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸುತ್ತಿದೆ. ಈ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ದೇಶದ ರಾಜಕೀಯದಲ್ಲಿ ಜನತಾದಳ ಪರಿವಾರ ಮತ್ತೆ ಪರ್ಯಾಯ ಆಯ್ಕೆಯಾಗುತ್ತಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

ಬಿಹಾರದಲ್ಲಿ ನಡೆದಿರುವ ಬೆಳವಣಿಗೆ ಜನತಾ ಪರಿವಾರದ ಮೂಲವನ್ನು ಹೊಂದಿರುವ ಎರಡು ಪಕ್ಷಗಳು ಒಟ್ಟಿಗೆ ಸೇರಿ ಸರ್ಕಾರ ರಚಿಸುತ್ತಿದ್ದು, ಈ ಬೆಳವಣಿಗೆ ಜನತಾ ಪರಿವಾರ ಒಗ್ಗಟ್ಟಿನಿಂದ ಇದ್ದ ದಿನಗಳನ್ನು ನೆನೆಪಿಸುತ್ತಿದೆ ಎಂದು ದೇವೇಗೌಡ ಟ್ವೀಟ್ ಮಾಡಿದ್ದಾರೆ.

 
ಬಿಹಾರದ ಬೆಳವಣಿಗೆಗಳು ನನಗೆ ಜನತಾದಳ ಪರಿವಾರ ಒಗ್ಗಟ್ಟಿನಿಂದ ಇದ್ದ ದಿನಗಳನ್ನು ನೆನಪಿಸುತ್ತಿದೆ. ಜನತಾ ಪರಿವಾರ ಮೂವರು ಪ್ರಧಾನಿಗಳನ್ನು ನೀಡಿದೆ. ನಾನು ನನ್ನ ಉತ್ತರಾರ್ಧದ ದಿನಗಳಲ್ಲಿದ್ದೇನೆ ಆದರೆ ಈಗಿನ ಯುವ ಜನತೆ ನಿರ್ಧರಿಸಿದರೆ ಈ ಶ್ರೇಷ್ಠ ರಾಷ್ಟ್ರಕ್ಕೆ ಉತ್ತಮ ಪರ್ಯಾಯ ರಾಜಕೀಯ ಶಕ್ತಿಯನ್ನು ನೀಡಬಹುದು ಎಂದು ದೇವೇಗೌಡ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT