ವಿದಾಯ ಭಾಷಣ ಮಾಡಿದ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು 
ದೇಶ

'ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಗೂ ಮಾತನಾಡಲು ಬಿಡಿ, ನಿಮ್ಮಲ್ಲಿ ತಾಳ್ಮೆಯಿಲ್ಲದಿದ್ದರೆ ರೋಗಿಗಳಾಗಿಬಿಡುತ್ತೀರಿ': ನಿರ್ಗಮಿತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ನಿರ್ಗಮಿತ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಸರ್ಕಾರಕ್ಕೆ ಮತ್ತು ವಿರೋಧ ಪಕ್ಷಕ್ಕೆ ಒಂದು ಸಲಹೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡುವ ತೀರ್ಪುಗಳನ್ನು ಸ್ವೀಕರಿಸುವ ಸಹಿಷ್ಣುತೆ ಬೇಕು. ಸಂಸತ್ತಿನಲ್ಲಿ ಆಡಳಿತ ಪಕ್ಷದಲ್ಲಿರುವ ಸದಸ್ಯರು ವಿರೋಧ ಪಕ್ಷಗಳ ಸದಸ್ಯರು ಮಾತನಾಡಲು, ತಮ್ಮ ಅಭಿಪ್ರಾಯ ಕೊಡಲು ಅವಕಾಶ ನೀಡಬೇಕು ಎಂದಿದ್ದಾರೆ.

ನವದೆಹಲಿ: ನಿರ್ಗಮಿತ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಸರ್ಕಾರಕ್ಕೆ ಮತ್ತು ವಿರೋಧ ಪಕ್ಷಕ್ಕೆ ಒಂದು ಸಲಹೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡುವ ತೀರ್ಪುಗಳನ್ನು ಸ್ವೀಕರಿಸುವ ಸಹಿಷ್ಣುತೆ ಬೇಕು. ಸಂಸತ್ತಿನಲ್ಲಿ ಆಡಳಿತ ಪಕ್ಷದಲ್ಲಿರುವ ಸದಸ್ಯರು ವಿರೋಧ ಪಕ್ಷಗಳ ಸದಸ್ಯರು ಮಾತನಾಡಲು, ತಮ್ಮ ಅಭಿಪ್ರಾಯ ಕೊಡಲು ಅವಕಾಶ ನೀಡಬೇಕು ಎಂದಿದ್ದಾರೆ.

ನಿನ್ನೆ ಸಂಸತ್ತು ಭವನದಲ್ಲಿ ಎಂ ವೆಂಕಯ್ಯ ನಾಯ್ಡು ಅವರಿಗೆ ವಿದಾಯ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅದರಲ್ಲಿ ಮಾತನಾಡಿದ ಅವರು, ರಾಜಕೀಯ ಜೀವನದಲ್ಲಿ ತಾಳ್ಮೆ ಬೇಕು, ಸರ್ಕಾರವನ್ನು, ಆಡಳಿತವನ್ನು, ದೇಶವನ್ನು ಆಳುವವರನ್ನು ಬದಲಾಯಿಸಬೇಕೆಂದು ಬಯಸುವವರು ಜನರ ಬಳಿಗೆ ಹೋಗಿ ಅದನ್ನು ಸಾಧಿಸಿಕೊಳ್ಳಬೇಕು ಎಂದರು.

ನಿಮ್ಮಲ್ಲಿ ತಾಳ್ಮೆಯಿಲ್ಲದಿದ್ದರೆ ನೀವು ರೋಗಿಗಳಾಗಿಬಿಡುತ್ತೀರಿ ಎಂದರು. ಇದೇ ಸಂದರ್ಭದಲ್ಲಿ ಸರ್ಕಾರಕ್ಕೆ ಸಲಹೆ ನೀಡಿದ ಅವರು, ನೀವು ಸದನದಲ್ಲಿ ಬಹುಮತ ಹೊಂದಿದ್ದರೂ ಕೂಡ ವಿರೋಧ ಪಕ್ಷಗಳಿಗೆ ಗೌರವ ಕೊಡಬೇಕು. ವಿರೋಧ ಪಕ್ಷಗಳು ಕೂಡ ಮಾತನಾಡಲಿ, ನಂತರ ಸರ್ಕಾರಕ್ಕೆ ಮಾತನಾಡಲು ಅವಕಾಶ ಸುಲಭವಾಗಿ ಸಿಗುತ್ತದೆ, ಏಕೆಂದರೆ ಅದಕ್ಕೆ ಬಹುಮತವಿದೆ, ಇದು ನನ್ನ ಸಲಹೆ ಎಂದರು.

ಇನ್ನು ಬಿಜೆಪಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರೊಂದಿಗೆ ತಮ್ಮ ಒಡನಾಟವನ್ನು ನೆನಪು ಮಾಡಿಕೊಂಡ ಅವರು ಇವರಿಬ್ಬರನ್ನೂ ನಾನು ದೇವರಿಗಿಂತ ನಂತರದವರು ಎಂದು ಭಾವಿಸುತ್ತೇನೆ ಎಂದರು.

ತಾವು ರೈತ ಕುಟುಂಬ ಹಿನ್ನೆಲೆಯಿಂದ ಬಂದವನಾಗಿದ್ದು ಶಾಲೆಗೆ ಹೋಗಲು ಕಿಲೋ ಮೀಟರ್ ಗಟ್ಟಲೆ ನಡೆಯಬೇಕಾಗಿತ್ತು ಎಂದು ತಮ್ಮ ಬಾಲ್ಯದ ಜೀವನವನ್ನು ಕೂಡ ನೆನಪು ಮಾಡಿಕೊಂಡರು.

ಇನ್ನು ತಮಗೆ ಜನರಿಂದ ಸಿಗುವ ಅಭಿಪ್ರಾಯ, ಸಲಹೆಗಳನ್ನು ಪ್ರಧಾನ ಮಂತ್ರಿಗಳಿಗೆ ವರ್ಗಾಯಿಸುವುದಾಗಿ ಹೇಳಿದ ವೆಂಕಯ್ಯ ನಾಯ್ಡು, ಶಿಷ್ಟಾಚಾರಗಳನ್ನು ಮುರಿಯಲು ಸಾಧ್ಯವಿಲ್ಲ. ಪ್ರಧಾನಿಯವರಿಗೆ ವಿಷಯ ತಲುಪಿಸುವುದು ತಮ್ಮ ಕೆಲಸವಷ್ಟೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT