ಆರ್ ಜೆಡಿ ಪಕ್ಷದ ನಾಯಕರೊಂದಿಗೆ ನಿತೀಶ್ ಕುಮಾರ್ 
ದೇಶ

ಬಿಹಾರ: ನಿತೀಶ್ ಕುಮಾರ್ ಗೆ ಮಹಾಘಟಬಂಧನ್ 7 ಪಕ್ಷಗಳ 164 ಶಾಸಕರು ಸಾಥ್; ಬಿಜೆಪಿ ಬಹುತೇಕ ಏಕಾಂಗಿ!

ಬಿಹಾರದಲ್ಲಿ ಎನ್ ಡಿಎ, ಬಿಜೆಪಿ ಮೈತ್ರಿ ಮುರಿದುಕೊಂಡಿರುವ ನಿತೀಶ್ ಕುಮಾರ್ ಎರಡನೇ ಬಾರಿಗೆ ಆರ್ ಜೆಡಿ, ಕಾಂಗ್ರೆಸ್ ಇತ್ಯಾದಿ ಮಹಾಘಟಬಂಧನ್ ನಲ್ಲಿ ಗುರುತಿಸಿಕೊಂಡಿರುವ ಪಕ್ಷಗಳ ಬೆಂಬಲದೊಂದಿಗೆ ಸಿಎಂ ಆಗುತ್ತಿದ್ದಾರೆ. 

ಪಾಟ್ನ: ಬಿಹಾರದಲ್ಲಿ ಎನ್ ಡಿಎ, ಬಿಜೆಪಿ ಮೈತ್ರಿ ಮುರಿದುಕೊಂಡಿರುವ ನಿತೀಶ್ ಕುಮಾರ್ ಎರಡನೇ ಬಾರಿಗೆ ಆರ್ ಜೆಡಿ, ಕಾಂಗ್ರೆಸ್ ಇತ್ಯಾದಿ ಮಹಾಘಟಬಂಧನ್ ನಲ್ಲಿ ಗುರುತಿಸಿಕೊಂಡಿರುವ ಪಕ್ಷಗಳ ಬೆಂಬಲದೊಂದಿಗೆ ಸಿಎಂ ಆಗುತ್ತಿದ್ದಾರೆ. 

ನಿತೀಶ್ ಕುಮಾರ್ ಗೆ ಮಹಾಘಟಬಂಧನ್ ನ 7 ಪಕ್ಷಗಳು, 164 ಶಾಸಕರು ಬೆಂಬಲ ಘೋಷಿಸಿದ್ದು, ರಾಜ್ಯದಲ್ಲಿ ಬಿಜೆಪಿ ಏಕಾಂಗಿಯಾಗಿದೆ. 

ಈ ಹಿಂದೆ ನಿತೀಶ್ ಕುಮಾರ್ ಅವರಿಂದ ತೆರವಾಗಿದ್ದ ಸಿಎಂ ಸ್ಥಾನವನ್ನು ಅಲಂಕರಿಸಿದ್ದ, ಬಳಿಕ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂಸ್ಥಾನಿ ಅವಾಮ್ ಮೋರ್ಚಾ ಪಕ್ಷ ಸ್ಥಾಪಿಸಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಜಿತನ್ ರಾಮ್ ಮಾಂಝಿ ಸಹ ಈಗ ಎನ್ ಡಿಎ ತೊರೆದು ನಿತೀಶ್ ಕುಮಾರ್ ಜೊತೆ ಮಹಾಘಟಬಂಧನ್ ಜೊತೆ ಕೈ ಜೋಡಿಸಿದ್ದಾರೆ. 

ಹೆಚ್ಎಎಂ ಪಕ್ಷದಿಂದ ವಿಧಾನಸಭೆಗೆ 4 ಶಾಸಕರು ಆಯ್ಕೆಯಾಗಿದ್ದಾರೆ. ತಮ್ಮ ಪಕ್ಷದ ಶಾಸಕರ ಸಭೆಯಲ್ಲಿ ನಿತೀಶ್ ಕುಮಾರ್ ಅವರಿಗೆ ಬೆಂಬಲ ನೀಡುವುದೇ ಸೂಕ್ತ ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂದು ಮಾಂಝಿ ಹೇಳಿದ್ದಾರೆ.

ಬಿಹಾರದ ಪ್ರಾದೇಶಿಕ ಪಕ್ಷಗಳ ಪೈಕಿ ಬಹುತೇಕ ಪಕ್ಷಗಳು ಈಗ ನಿತೀಶ್ ಕುಮಾರ್ ಬೆಂಬಲಕ್ಕೆ ನಿಂತಿದ್ದು, 243 ಶಾಸಕರ ಪೈಕಿ 164 ಶಾಸಕರು ತಮ್ಮ ಬೆಂಬಲ ನಿತೀಶ್ ಕುಮಾರ್ ಗೆ ಎಂದು ಘೋಷಿಸಿದ್ದಾರೆ. ಆರ್ ಜೆಡಿ-79 ಶಾಸಕರು, ಬಿಜೆಪಿ-77, ಜೆಡಿಯು-45, ಕಾಂಗ್ರೆಸ್ 19 ಶಾಸಕರು, ಎಡಪಕ್ಷಗಳು 16 ಶಾಸಕರನ್ನು ಹೊಂದಿವೆ.
 
ಕೇಂದ್ರ ಸಚಿವ ಪಶುಪತಿ ಕುಮಾರ್ ಪಾರಸ್ ಅವರ ಲೋಕಜನಶಕ್ತಿ ಪಕ್ಷ ಮಾತ್ರ ಬಿಹಾರದಲ್ಲಿ ಬಹುತೇಕ ಎಲ್ಲಾ ಮಿತ್ರಪಕ್ಷಗಳನ್ನೂ ಕಳೆದುಕೊಂಡಿರುವ ಬಿಜೆಪಿ ನೇತೃತ್ವದ ಎನ್ ಡಿಎ ಜೊತೆ ಈಗ ಉಳಿದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT