ನಿತೀಶ್ ಕುಮಾರ್ 
ದೇಶ

ನಿತೀಶ್ ಕುಮಾರ್ ಅವಕಾಶವಾದಿ ರಾಜಕಾರಣಿ: ಬಿಜೆಪಿ ಮುಖಂಡರು ವಾಗ್ದಾಳಿ

ನಿತೀಶ್ ಕುಮಾರ್ ಪ್ರಧಾನ ಮಂತ್ರಿ ಮಹತ್ವಾಕಾಂಕ್ಷೆಯಿಂದ ಎನ್ ಡಿಎ ತೊರೆದು ಆರ್ ಜೆಡಿ ನೇತೃತ್ವದ ಪ್ರತಿಪಕ್ಷದೊಂದಿಗೆ ಕೈ ಜೋಡಿಸಿರುವುದಾಗಿ ದೂಷಿಸಿರುವ ಬಿಜೆಪಿ, ಜನಾದೇಶವನ್ನು ಅಪಮಾನಿಸಿ ದ್ರೋಹ ಬಗೆದಿದ್ದಾರೆ ಎಂದು  ಮಂಗಳವಾರ ಆರೋಪಿಸಿದೆ.

ನವದೆಹಲಿ: ನಿತೀಶ್ ಕುಮಾರ್ ಪ್ರಧಾನ ಮಂತ್ರಿ ಮಹತ್ವಾಕಾಂಕ್ಷೆಯಿಂದ ಎನ್ ಡಿಎ ತೊರೆದು ಆರ್ ಜೆಡಿ ನೇತೃತ್ವದ ಪ್ರತಿಪಕ್ಷದೊಂದಿಗೆ ಕೈ ಜೋಡಿಸಿರುವುದಾಗಿ ದೂಷಿಸಿರುವ ಬಿಜೆಪಿ, ಜನಾದೇಶವನ್ನು ಅಪಮಾನಿಸಿ ದ್ರೋಹ ಬಗೆದಿದ್ದಾರೆ ಎಂದು ಮಂಗಳವಾರ ಆರೋಪಿಸಿದೆ.

ತೇಜಸ್ವಿ ಯಾದವ್ ವಿರುದ್ಧ ಭ್ರಷ್ಟಾಚಾರ ಆರೋಪದ ಮೇರೆಗೆ 2017ರಲ್ಲಿ ಆರ್ ಜೆಡಿಯೊಂದಿಗೆ ಸಂಬಂಧ ಕಡಿದುಕೊಂಡಿದ್ದ ನಿತೀಶ್ ಕುಮಾರ್, ಮತ್ತೆ ಆ ಪಕ್ಷದೊಂದಿಗೆ ಮೈತ್ರಿಯನ್ನು ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂದು ಬಿಜೆಪಿ ಮುಖಂಡರು ಪ್ರಶ್ನಿಸಿದ್ದಾರೆ. ನಿತೀಶ್ ಕುಮಾರ್ ಆಗಾಗ್ಗೆ ಪಕ್ಷ ಬದಲಾಯಿಸುವಲ್ಲಿ ನಿಸ್ಸೀಮರು ಎಂದು ವಾಗ್ದಾಳಿ ನಡೆಸಿದ್ದಾರೆ.

1999 ರಿಂದಲೂ ನಿತೀಶ್ ಕುಮಾರ್ ಅವರನ್ನು ಬಿಜೆಪಿ ಬೆಂಬಲಿಸುತ್ತಾ ಬಂದಿದೆ. 2013ರಲ್ಲಿ ಅವರು ಪ್ರಧಾನ ಮಂತ್ರಿ ಆಪೇಕ್ಷೆ ಹೊಂದಿದ್ದರು. ಅದಕ್ಕಾಗಿ ಬಿಜೆಪಿಯಿಂದ ಪ್ರತ್ಯೇಕವಾದರು. ಇದೇ ಕಾರಣದಿಂದ ಈಗ ಮತ್ತೆ ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡಿದ್ದಾರೆ ಎಂದು ಹೇಳಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ನಿತೀಶ್ ಕುಮಾರ್ ಆಗಾಗ್ಗೆ ಪಕ್ಷ ಬದಲಾಯಿಸುವಲ್ಲಿ ನಿಸ್ಸಿಮ ಎಂದರು. 

ನಿತೀಶ್ ಕುಮಾರ್ ಅವಕಾಶವಾದಿ ರಾಜಕಾರಣಿ ಎಂದು ಕೇಂದ್ರ ಸಚಿವ ಅಶ್ವಿನಿ ಚೌಬೆ ಆರೋಪಿಸಿದ್ದಾರೆ.  ಅಭಿವೃದ್ಧಿಯಲ್ಲಿ ತೊಡಕನ್ನು ಸೃಷ್ಟಿಸುವ ಮೂಲಕ ಬಿಹಾರಕ್ಕೆ ದ್ರೋಹಕ್ಕೆ ಬಗೆಯುತ್ತಿದ್ದಾರೆ. ಬಿಜೆಪಿ ಯಾರಿಗೂ ದ್ರೋಹ ಮಾಡಲ್ಲ, ಯಾರನ್ನು ಅಡಗಿಸುವುದಿಲ್ಲ, ಬಿಹಾರಕ್ಕೆ ದ್ರೋಹ ಮಾಡುತ್ತಿರುವವರು ಅಭಿವೃದ್ಧಿಯಲ್ಲಿ ತೊಡಕನ್ನು ಸೃಷ್ಟಿಸುತ್ತಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಿಂದ ಹಿಡಿದು ಮೋದಿ ಸರ್ಕಾರದವರೆಗೂ ಬಿಹಾರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

2020ರಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರಲ್ಲಿ ಮತಗಳನ್ನು ಪಡೆದ ನಿತೀಶ್ ಕುಮಾರ್, ಅಧಿಕಾರ ಅನುಭವಿಸಿ ಜನಾದೇಶವನ್ನು ಅಪಮಾನಿಸಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT