ತೇಜಸ್ವಿ ಯಾದವ್-ನಿತೀಶ್ ಕುಮಾರ್ 
ದೇಶ

ಬಿಹಾರದಲ್ಲಿ ಮಹಾಘಟಬಂಧನ್ 2.0: ನಿತೀಶ್ ನೂತನ ಸರ್ಕಾರದಲ್ಲಿ ತೇಜಸ್ವಿ ಯಾದವ್ ಡಿಸಿಎಂ?

ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.

ಪಾಟ್ನಾ: ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.

ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳ ನಡುವಿನ ಮೊದಲ ಮೈತ್ರಿ ಮುರಿದು ಬಿದ್ದ ಸ್ಥಳದಲ್ಲಿ ಮಹಾಘಟಬಂಧನ್ 2.0 ಪ್ರಾರಂಭವಾಗಲಿದೆ ಎಂದು ಲಾಲು ಯಾದವ್ ಪಕ್ಷದ ಮೂಲಗಳು ಸೂಚಿಸಿವೆ. ತೇಜಸ್ವಿ ಯಾದವ್ ಅವರು ನಿತೀಶ್ ಕುಮಾರ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಮರಳಲಿದ್ದಾರೆ ಮತ್ತು ಅವರ ಹಿರಿಯ ಸಹೋದರ ತೇಜ್ ಪ್ರತಾಪ್ ಯಾದವ್ ಅವರು ಸಂಪುಟದಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯೊಂದಿಗಿನ ನಿತೀಶ್ ಕುಮಾರ್ ಅವರ ವಿಘಟನೆಯನ್ನು ರಕ್ತರಹಿತ ದಂಗೆ ಎಂದು ಬಣ್ಣಿಸಲಾಗಿದ್ದರೂ, ಸರ್ಕಾರದ ವಿಭಜನೆಯ ಹಾದಿ ಮತ್ತು ಮುಂದಿನ ಸರ್ಕಾರದ ವಿವರಗಳನ್ನು ಕಳೆದ ಮೂರ್ನಾಲ್ಕು ತಿಂಗಳುಗಳಿಂದ ರೂಪಿಸಲಾಗುತ್ತಿತ್ತು ಎಂದು ಮೂಲಗಳು ಸೂಚಿಸಿವೆ.

ಮೇ ತಿಂಗಳಲ್ಲಿ ನಿತೀಶ್ ಕುಮಾರ್ ಅವರು ತೇಜಸ್ವಿ ಯಾದವ್ ಅವರ ಮನೆಗೆ ಇಫ್ತಾರ್ ಕೂಟಕ್ಕಾಗಿ ಸೇರಿದಾಗಲೇ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಬೀಳುವ ಲಕ್ಷಣಗಳು ಗೋಚರವಾಗಿದ್ದವು.  ಅದರ ನಂತರ ನಿತೀಶ್ ಕುಮಾರ್ ಅವರ ಇಫ್ತಾರ್ ಕೂಟದಲ್ಲಿ ತೇಜಸ್ವಿ ಯಾದವ್ ಭಾಗಿಯಾದ ಬಳಿಕ ರಾಜಕೀಯ ಅಂಗಳದಲ್ಲಿ ಇಬ್ಬರ ಭೇಟಿಯ ಚರ್ಚೆ ಜೋರಾಯಿತು.

ಇಂದು ಸಂಜೆ 4 ಗಂಟೆಗೆ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು ಹೊಸ ಸರ್ಕಾರ ರಚನೆಯಲ್ಲಿ ಯಾರಿರಲಿದ್ದಾರೆ ಎಂಬುದು ಗೊತ್ತಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT