ತೇಜಸ್ವಿ ಯಾದವ್-ನಿತೀಶ್ ಕುಮಾರ್ 
ದೇಶ

ಬಿಹಾರದಲ್ಲಿ ಮಹಾಘಟಬಂಧನ್ 2.0: ನಿತೀಶ್ ನೂತನ ಸರ್ಕಾರದಲ್ಲಿ ತೇಜಸ್ವಿ ಯಾದವ್ ಡಿಸಿಎಂ?

ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.

ಪಾಟ್ನಾ: ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.

ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳ ನಡುವಿನ ಮೊದಲ ಮೈತ್ರಿ ಮುರಿದು ಬಿದ್ದ ಸ್ಥಳದಲ್ಲಿ ಮಹಾಘಟಬಂಧನ್ 2.0 ಪ್ರಾರಂಭವಾಗಲಿದೆ ಎಂದು ಲಾಲು ಯಾದವ್ ಪಕ್ಷದ ಮೂಲಗಳು ಸೂಚಿಸಿವೆ. ತೇಜಸ್ವಿ ಯಾದವ್ ಅವರು ನಿತೀಶ್ ಕುಮಾರ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಮರಳಲಿದ್ದಾರೆ ಮತ್ತು ಅವರ ಹಿರಿಯ ಸಹೋದರ ತೇಜ್ ಪ್ರತಾಪ್ ಯಾದವ್ ಅವರು ಸಂಪುಟದಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯೊಂದಿಗಿನ ನಿತೀಶ್ ಕುಮಾರ್ ಅವರ ವಿಘಟನೆಯನ್ನು ರಕ್ತರಹಿತ ದಂಗೆ ಎಂದು ಬಣ್ಣಿಸಲಾಗಿದ್ದರೂ, ಸರ್ಕಾರದ ವಿಭಜನೆಯ ಹಾದಿ ಮತ್ತು ಮುಂದಿನ ಸರ್ಕಾರದ ವಿವರಗಳನ್ನು ಕಳೆದ ಮೂರ್ನಾಲ್ಕು ತಿಂಗಳುಗಳಿಂದ ರೂಪಿಸಲಾಗುತ್ತಿತ್ತು ಎಂದು ಮೂಲಗಳು ಸೂಚಿಸಿವೆ.

ಮೇ ತಿಂಗಳಲ್ಲಿ ನಿತೀಶ್ ಕುಮಾರ್ ಅವರು ತೇಜಸ್ವಿ ಯಾದವ್ ಅವರ ಮನೆಗೆ ಇಫ್ತಾರ್ ಕೂಟಕ್ಕಾಗಿ ಸೇರಿದಾಗಲೇ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಬೀಳುವ ಲಕ್ಷಣಗಳು ಗೋಚರವಾಗಿದ್ದವು.  ಅದರ ನಂತರ ನಿತೀಶ್ ಕುಮಾರ್ ಅವರ ಇಫ್ತಾರ್ ಕೂಟದಲ್ಲಿ ತೇಜಸ್ವಿ ಯಾದವ್ ಭಾಗಿಯಾದ ಬಳಿಕ ರಾಜಕೀಯ ಅಂಗಳದಲ್ಲಿ ಇಬ್ಬರ ಭೇಟಿಯ ಚರ್ಚೆ ಜೋರಾಯಿತು.

ಇಂದು ಸಂಜೆ 4 ಗಂಟೆಗೆ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು ಹೊಸ ಸರ್ಕಾರ ರಚನೆಯಲ್ಲಿ ಯಾರಿರಲಿದ್ದಾರೆ ಎಂಬುದು ಗೊತ್ತಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT