ದೇವೇಂದ್ರ ಫಡ್ನವೀಸ್ 
ದೇಶ

ಮಹಾರಾಷ್ಟ್ರ: ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಸ್ಥಾನ- ಫಡ್ನವೀಸ್ 

ಮಹಾರಾಷ್ಟ್ರದ ವಿಸ್ತರಿತ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾಧ್ಯಾನತೆ ನೀಡದಿರುವುದಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವಂತೆಯೇ, ಮುಂದಿನ ಸುತ್ತಿನ ಸಂಪುಟ ವಿಸ್ತರಣೆಯಲ್ಲಿ ಮಹಿಳಾ ಶಾಸಕರಿಗೆ ಖಂಡಿತವಾಗಿ ಸ್ಥಾನ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಮುಂಬೈ/ ಪುಣೆ: ಮಹಾರಾಷ್ಟ್ರದ ವಿಸ್ತರಿತ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾಧ್ಯಾನತೆ ನೀಡದಿರುವುದಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವಂತೆಯೇ, ಮುಂದಿನ ಸುತ್ತಿನ ಸಂಪುಟ ವಿಸ್ತರಣೆಯಲ್ಲಿ ಮಹಿಳಾ ಶಾಸಕರಿಗೆ ಖಂಡಿತವಾಗಿ ಸ್ಥಾನ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ವಿಸ್ತರಣೆಯೊಂದಿಗೆ ಶಿಂಧೆ ನೇತೃತ್ವದ ಸಂಪುಟದಲ್ಲಿನ ಸಚಿವರ ಸ್ಥಾನ 20ಕ್ಕೆ ಏರಿಕೆಯಾಗಿದೆ. 

ಟೀಕೆಗಳ ಕುರಿತು ಮುಂಬೈನಲ್ಲಿ ಪ್ರತಿಕ್ರಿಯಿಸಿದ ಫಡ್ನವೀಸ್, ಖಂಡಿತವಾಗಿಯೂ ಮುಂದಿನ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಲಾಗುವುದು, ಹಿಂದೆ ಸಂಪುಟ ವಿಸ್ತರಣೆ ವಿಳಂಬವಾಗಿದ್ದಕ್ಕೆ ಟೀಕಿಸುತ್ತಿದ್ದ ಜನರು, ಇದೀಗ ಹೊಸ ವಿಚಾರದೊಂದಿಗೆ ಟೀಕಿಸುತ್ತಿದ್ದಾರೆ ಎಂದರು. 

2019 ನವೆಂಬರ್ ನಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಒಬ್ಬ ಮಹಿಳೆ ಕೂಡಾ ಇರಲಿಲ್ಲ. ಆ ಸರ್ಕಾರವನ್ನು ಯಾರು ಕೂಡಾ ಟೀಕಿಸಿರಲಿಲ್ಲ ಎಂದು ಅವರು ಹೇಳಿದರು. ಕಾಂಗ್ರೆಸ್, ಎನ್ ಸಿಪಿಯ ಬೆಂಬಲದೊಂದಿಗೆ ಐವರು ಸಚಿವರೊಂದಿಗೆ 2019 ನವೆಂಬರ್ ನಲ್ಲಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ನಂತರ ಮಹಿಳೆಯರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿತ್ತು. 

ಭ್ರಷ್ಟಾಚಾರ ಆರೋಪವಿರುವ ಕೆಲವರನ್ನು ಸಂಪುಟದಲ್ಲಿ ಸೇರಿಸಿಕೊಳ್ಳಲಾಗಿದೆ ಎಂಬ ಎನ್ ಸಿಪಿ ಆರೋಪದ ವಿರುದ್ಧ ವಾಗ್ದಾಳಿ ನಡೆಸಿದ ಫಡ್ನವೀಸ್, ಮಹಾ ವಿಕಾಸ್ ಆಘಾಡಿ ಸರ್ಕಾರದ ಅವಧಿಯಲ್ಲಿ ಅವರ ಪಕ್ಷದ ಇಬ್ಬರು ಸಚಿವರು ಭ್ರಷ್ಟಾಚಾರ ಆರೋಪದ ಮೇರೆಗೆ ಜೈಲಿನಲ್ಲಿದ್ದಾಗ ನಮ್ಮ ಸಚಿವರ ಬಗ್ಗೆ ಅವರಿಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT