ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ 
ದೇಶ

ಚೆಸ್ ಒಲಂಪಿಯಾಡ್: ಪದಕ ಗೆದ್ದ ಭಾರತ ತಂಡಗಳಿಗೆ ಕೋಟಿ ರೂ ನಗದು ಬಹುಮಾನ ಘೋಷಿಸಿದ ಎಂಕೆ ಸ್ಟಾಲಿನ್

ತಮಿಳುನಾಡಿನಲ್ಲಿ ಮುಕ್ತಾಯವಾದ 44ನೇ ಚೆಸ್ ಒಲಿಂಪಿಯಾಡ್‌ ಕ್ರೀಡಾಕೂಟದಲ್ಲಿ ಭಾರತದ ಪರ ಪದಕಗಳನ್ನು ಗೆದ್ದ ಭಾರತ ತಂಡಗಳಿಗೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು, 1 ಕೋಟಿ ರೂ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

ಚೆನ್ನೈ: ತಮಿಳುನಾಡಿನಲ್ಲಿ ಮುಕ್ತಾಯವಾದ 44ನೇ ಚೆಸ್ ಒಲಿಂಪಿಯಾಡ್‌ ಕ್ರೀಡಾಕೂಟದಲ್ಲಿ ಭಾರತದ ಪರ ಪದಕಗಳನ್ನು ಗೆದ್ದ ಭಾರತ ತಂಡಗಳಿಗೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು, 1 ಕೋಟಿ ರೂ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

44ನೇ ಚೆಸ್ ಒಲಿಂಪಿಯಾಡ್‌ ಕ್ರೀಡಾಕೂಟದಲ್ಲಿ ಭಾರತ ಪುರುಷರ 'ಬಿ' ತಂಡ ಹಾಗೂ ಭಾರತ ಮಹಿಳಾ 'ಎ' ತಂಡ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆದ ಚೆಸ್‌ ಒಲಿಂಪಿಯಾಡ್‌ನಲ್ಲಿ ಪದಕ ಗೆದ್ದ ಭಾರತದ ತಂಡಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ ತಲಾ ಒಂದು ಕೋಟಿ ರುಪಾಯಿ ಬಹುಮಾನ ಘೋಷಿಸಿದ್ದಾರೆ. 

ತಮಿಳುನಾಡು ಸರ್ಕಾರದ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಒಳಾಂಗಣ ಕ್ರೀಡಾಕೂಟವು ಯಶಸ್ವಿಯಾಗಿ ಆಯೋಜನೆಗೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಭಾರತ ಚೆಸ್‌ ತಂಡದ ಪ್ರದರ್ಶನದ ಕುರಿತಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹರ್ಷ ವ್ಯಕ್ತಪಡಿಸಿದ್ದು, ಚೆಸ್‌ ಒಲಿಂಪಿಯಾಡ್‌ನಲ್ಲಿ ಪದಕ ಗೆಲ್ಲುವ ಮೂಲಕ ಇಡೀ ದೇಶವೇ ಹೆಮ್ಮೆಪಡುವಂತಹ ಸಾಧನೆ ಮಾಡಿದ ಭಾರತದ ಎರಡೂ ತಂಡಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಸರ್ಕಾರದ ವತಿಯಿಂದ ಪದಕ ಗೆದ್ದ ಭಾರತದ ಎರಡೂ ತಂಡಗಳಿಗೆ ತಲಾ ಒಂದು ಕೋಟಿ ರುಪಾಯಿ ನಗದು ಬಹುಮಾನ ನೀಡಿ ಗೌರವಿಸುವುದಾಗಿ ಸ್ಟಾಲಿನ್ ತಿಳಿಸಿದ್ದಾರೆ. 

FIDE ಚೆಸ್ ಒಲಿಂಪಿಯಾಡ್ ಕ್ರೀಡಾಕೂಟವು ಚೆನ್ನೈ ಸಮೀಪದ ಮಹಾಬಲಿಪುರಂನಲ್ಲಿ ಜುಲೈ 28ರಿಂದ ಆರಂಭವಾಗಿತ್ತು. ಮುಕ್ತ(ಪುರುಷರ) ವಿಭಾಗದಲ್ಲಿ ಭಾರತ ‘ಬಿ’ ತಂಡ ಕಂಚು ಗೆದ್ದರೆ, ಮಹಿಳಾ ವಿಭಾಗದಲ್ಲಿ ಭಾರತ ‘ಎ’ ತಂಡ ಸಹ 3ನೇ ಸ್ಥಾನ ಪಡೆಯಿತು. ಮುಕ್ತ ವಿಭಾಗದ 11ನೇ ಹಾಗೂ ಅಂತಿಮ ಸುತ್ತಿನಲ್ಲಿ ಭಾರತ ‘ಬಿ’ ತಂಡ ಜರ್ಮನಿ ವಿರುದ್ಧ 3-1ರಲ್ಲಿ ಗೆದ್ದು 3ನೇ ಸ್ಥಾನ ಪಡೆಯಿತು. ಇನ್ನುಳಿದಂತೆ ಉಜ್ಬೇಕಿಸ್ತಾನ ಚಿನ್ನ ಗೆದ್ದರೆ, ಅರ್ಮೇನಿಯಾ ಬೆಳ್ಳಿ ಪದಕ ಜಯಿಸಿತು. 

ಇನ್ನು ಮಹಿಳಾ ವಿಭಾಗದಲ್ಲಿ ಅಗ್ರ ಶ್ರೇಯಾಂಕ ಹೊಂದಿದ್ದ ಭಾರತ ‘ಎ’ ತಂಡ 11ನೇ ಹಾಗೂ ಕೊನೆಯ ಸುತ್ತಿನಲ್ಲಿ ಅಮೆರಿಕ ವಿರುದ್ಧ 1-3ರಲ್ಲಿ ಸೋತು ಚಿನ್ನದ ಪದಕ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತು. ಕೊನೆರು ಹಂಪಿ ನೇತೃತ್ವದ ಭಾರತ ಮಹಿಳಾ ಚೆಸ್‌ ತಂಡವು 3ನೇ ಸ್ಥಾನ ಪಡೆಯಿತು. 

ಚೆಸ್ ಒಲಿಂಪಿಯಾಡ್ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಟಾರ್ಚ್‌ ರಿಲೇಯನ್ನು ಪರಿಚಯಿಸಲಾಗಿತ್ತು. 187 ರಾಷ್ಟ್ರ ಗಳ ಆಟಗಾರರು ಕೂಟದಲ್ಲಿ ಪಾಲ್ಗೊಂಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT